Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:2 - ಕನ್ನಡ ಸತ್ಯವೇದವು C.L. Bible (BSI)

2 ನೋಡುವರು ಜನಾಂಗಗಳು ನಿನ್ನ ಸದ್ಧರ್ಮವನು ಕಾಣುವರು ಸಕಲ ರಾಜರು ನಿನ್ನ ವೈಭವವನು ಪಡೆಯುವೆ ನೀನು ಸರ್ವೇಶ್ವರನೇ ಕೊಟ್ಟ ಹೊಸ ಹೆಸರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇವಿುಸಿದ ಹೊಸ ಹೆಸರು ನಿನಗೆ ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಎಲ್ಲಾ ಜನಾಂಗದವರು ಆಕೆಯ ನ್ಯಾಯವನ್ನು ನೋಡುವರು. ಎಲ್ಲಾ ಅರಸರುಗಳು ಆಕೆಯ ಮಹಿಮೆಯನ್ನು ನೋಡುವರು. ಆಗ ನಿನಗೊಂದು ಹೊಸ ಹೆಸರನ್ನು ಕೊಡುವೆನು; ಯೆಹೋವನು ತಾನೇ ಆ ಹೆಸರನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಇತರ ಜನಾಂಗಗಳು ನಿನ್ನ ವಿಮೋಚನೆಯನ್ನೂ, ಅರಸರೆಲ್ಲರು ನಿನ್ನ ಮಹಿಮೆಯನ್ನೂ ನೋಡುವರು. ಯೆಹೋವ ದೇವರ ಬಾಯಿ ನೇಮಿಸುವ ಹೊಸ ಹೆಸರು ನಿನಗೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:2
33 ತಿಳಿವುಗಳ ಹೋಲಿಕೆ  

‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ಇನ್ನು ಮುಂದೆ ನಿನಗೆ ‘ಅಬ್ರಾಮ’ ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ ‘ಅಬ್ರಹಾಮ’ ಎಂಬ ಹೆಸರಿರುವುದು.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ದೇವರುಅಬ್ರಹಾಮನಿಗೆ ಇನ್ನೂ ಹೇಳಿದ್ದು ಏನೆಂದರೆ: “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳು ಎಂದು ಕರೆಯದೆ ಸಾರಳು ಎಂದು ಕರೆಯಬೇಕು.


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ಅದೇನೆಂದರೆ, ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕು; ಸತ್ತು ಪುನರುತ್ಥಾನವಾದವರಲ್ಲಿ ಮೊತ್ತಮೊದಲಿಗನಾಗಿ ಯೆಹೂದ್ಯರಿಗೂ ಅನ್ಯಧರ್ಮೀಯರಿಗೂ ಪರಂಜ್ಯೋತಿಯನ್ನು ಪ್ರಕಟಿಸಬೇಕು,” ಎಂದನು.


ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ತರುತ್ತಿಹರು ರಾಷ್ಟ್ರಗಳ ಆಸ್ತಿಯನ್ನು ನಿನ್ನಲ್ಲಿಗೆ ಬರುತಿಹರು ಅವುಗಳ ಅರಸರು ಮೆರವಣಿಗೆಯೊಂದಿಗೆ. ನಿನ್ನ ದ್ವಾರಗಳು ತೆರೆದಿರುವುವು ಹಗಲಿರುಳು ಮುಚ್ಚದೆ.


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು I ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು II


ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.


ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು.


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ನನ್ನ ಆಲಯದಲ್ಲೆ, ಅದರ ಪ್ರಾಕಾರಗಳಲ್ಲೆ, ಅವರ ಸ್ಮಾರಕ ಶಿಲೆಗಳನ್ನು ಇಡುವೆನು. ಮಕ್ಕಳನ್ನು ಪಡೆದವರಿಗಿಂತಲು ಶ್ರೇಷ್ಠವಾದ ಹೆಸರನ್ನು ಅವರಿಗೆ ದಯಪಾಲಿಸುವೆನು. ಹೌದು, ಎಂದಿಗೂ ಅಳಿಯದ, ಶಾಶ್ವತವಾಗಿ ಉಳಿಯುವ, ಹೆಸರನ್ನು ಅವರಿಗೆ ದಯಪಾಲಿಸುವೆನು.


ಆಕೆಯ ನಿಮಿತ್ತ ದುಃಖಿಸುವವರೇ, ‘ಸಾಂತ್ವನ ನೀಡುವ ಆಕೆಯ ಸ್ತನ್ಯದಿಂದ ತೃಪ್ತಿಗೊಳ್ಳುವೆವು, ಹೌದು, ಆಕೆಯ ಸಿರಿಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು,’ ಎಂದು ನೀವೆಲ್ಲರು ಉಲ್ಲಾಸಪಡಿ ಆಕೆಯೊಂದಿಗೆ.”


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು