ಯೆಶಾಯ 63:10 - ಕನ್ನಡ ಸತ್ಯವೇದವು C.L. Bible (BSI)10 ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಜನರು ಯೆಹೋವನಿಗೆ ವಿರುದ್ಧವಾಗಿ ಎದ್ದರು. ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಯೆಹೋವನು ಅವರ ಶತ್ರುವಾಗಿ ಪರಿಣಮಿಸಿದನು. ಅಂಥಾ ಜನರಿಗೆ ವಿರುದ್ಧವಾಗಿ ಯೆಹೋವನು ಯುದ್ಧಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು. ಅಧ್ಯಾಯವನ್ನು ನೋಡಿ |
ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.