Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 63:4 - ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ, ನನ್ನ ಜನರನು ಉದ್ಧರಿಸುವ ವರುಷವು ಬಂದಿತ್ತು ಮುಯ್ಯಿತೀರಿಸುವ ದಿನವು ನನ್ನ ಮನದಲ್ಲಿ ನಿಶ್ಚಿತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಕಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರುಷವು ಒದಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರನ್ನು ಶಿಕ್ಷಿಸಲು ನಾನೊಂದು ಸಮಯವನ್ನು ನಿಗದಿ ಮಾಡಿರುತ್ತೇನೆ. ಈಗ ನನ್ನ ಜನರನ್ನು ರಕ್ಷಿಸಿ ಕಾಪಾಡುವ ಸಮಯ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ. ನಾನು ವಿಮೋಚಿಸಿದವರ ವರುಷವು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 63:4
19 ತಿಳಿವುಗಳ ಹೋಲಿಕೆ  

ಏಕೆಂದರೆ ಸರ್ವೇಶ್ವರ ಮುಯ್ಯಿತೀರಿಸುವ ದಿನವು ಬಂದಿದೆ. ಸಿಯೋನಿಗೆ ನ್ಯಾಯ ದೊರಕಿಸಿ ಎದೋಮಿಗೆ ದಂಡನೆ ವಿಧಿಸುವ ವರ್ಷವು ಒದಗಿದೆ.


ನೀವು ಬಾಬಿಲೋನಿನಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿ, ಅದಕ್ಕೆ ಉಂಟಾಗುವ ದಂಡನೆಗೆ ನೀವು ಒಳಗಾಗಬೇಡಿ. ಸರ್ವೇಶ್ವರನಾದ ನಾನು ಮುಯ್ಯಿತೀರಿಸುವ ಕಾಲಬಂದಿದೆ. ಬಾಬಿಲೋನಿಗೆ ತಕ್ಕ ಪ್ರತೀಕಾರ ಮಾಡುವೆನು.


ಸರ್ವೇಶ್ವರ ಸ್ವಾಮಿಯ ಅನುಗ್ರಹದ ವರುಷವನು, ನಮ್ಮ ದೇವರು ಮುಯ್ಯಿತೀರಿಸುವಾ ದಿನವನು ಘೋಷಿಸಲೆಂದೆ.


ಚಂಚಲ ಹೃದಯರಿಗೆ ಹೀಗೆಂದು ಹೇಳಿ : “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.


ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು.


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ಸ್ತುತಿಸಲಿ ಆತನನು ವಿಮುಕ್ತಿ ಪಡೆದವರೆಲ್ಲರು I ಶತ್ರುಗಳಿಂದ ಬಿಡುಗಡೆ ಹೊಂದಿದವರೆಲ್ಲರು II


ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.


ಸಿಯೋನಿನ ಉದ್ಧಾರ ನ್ಯಾಯನೀತಿಯಿಂದ; ಅದಕ್ಕೆ ಹಿಂದಿರುಗುವವರ ಉದ್ಧಾರ ಸತ್ಸಂಬಂಧದಿಂದ;


ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ.


ಮುಯ್ಯಿ ತೀರಿಸುವೆನು ಯಾರನ್ನೂ ಕರುಣಿಸದೆ ಬೀದಿಪಾಲಾಗುವೆ ನೀನು ಲಜ್ಜೆಗೆಟ್ಟು, ಮಾನವಿಲ್ಲದೆ.”


ಏಕೆಂದರೆ ಸರ್ವೇಶ್ವರ ಹೀಗೆಂದು ಹೇಳಿದ್ದಾರೆ - ‘ಬೆಲೆಯಿಲ್ಲದೆ ಮಾರಲ್ಪಟ್ಟಿರಿ; ಹಣವಿಲ್ಲದೆ ಮುಕ್ತರಾಗುವಿರಿ.’


ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ !


ಇಗೋ, ಸರ್ವೇಶ್ವರನ ದಿನ ಬರುತ್ತಿದೆ ! ಭೂಮಿಯನ್ನು ಹಾಳುಮಾಡಲು, ಪಾಪಿಗಳನ್ನು ನಿರ್ಮೂಲಮಾಡಲು; ಕೋಪೋದ್ರೇಕದಿಂದ, ರೋಷಾವೇಶದಿಂದ, ಕ್ರೂರವಾಗಿ ಬರುತ್ತಿದೆ !


ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.


ನಾನು ಎದೋಮಿಗೆ ನನ್ನ ಜನರಾದ ಇಸ್ರಯೇಲರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು