Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:11 - ಕನ್ನಡ ಸತ್ಯವೇದವು C.L. Bible (BSI)

11 ನಮ್ಮ ಪಿತೃಗಳು ನಿಮ್ಮನ್ನು ಕೀರ್ತಿಸುತ್ತಿದ್ದ ಆ ಸ್ಥಳವೇ, ಆ ನಮ್ಮ ಚೆಲುವ ಪವಿತ್ರಾಲಯವೇ, ಬೆಂಕಿಯ ಪಾಲಾಗಿದೆ. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಮ್ಮ ಪಿತೃಗಳು ನಿನ್ನನ್ನು ಕೀರ್ತಿಸುತ್ತಿದ್ದ ನಮ್ಮ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯವಸ್ತುಗಳೆಲ್ಲಾ ನಾಶವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಶೃಂಗಾರವಾದ ದೇವಾಲಯ ಬೆಂಕಿಯಿಂದ ಸುಟ್ಟುಹೋಯಿತು. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:11
21 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ.


ಅವನ ಜನರು ಜೆರುಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿದರು; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಸ್ವಾಮಿ ತಿರಸ್ಕರಿಸಿಬಿಟ್ಟಿದ್ದಾನೆ ತನ್ನ ಬಲಿಪೀಠವನ್ನೇ ಅಸಹ್ಯಗೊಂಡು ತೊರೆದುಬಿಟ್ಟಿದ್ದಾನೆ ತನ್ನ ಪವಿತ್ರಸ್ಥಾನವನ್ನೇ ಸಿಯೋನ್ ಅರಮನೆಯ ಗೋಡೆಗಳನ್ನು ಕೆಡವಲು ಬಿಟ್ಟಿದ್ದಾನೆ ಹಗೆಗಳನ್ನೇ. ಹಬ್ಬಹರಿದಿನಗಳ ಜಯಘೋಷವೋ ಎಂಬಂತೆ ಘೋಷಣೆ ಹಾಕುತ್ತಿದ್ದಾರಲ್ಲಾ ಶತ್ರುಗಳು ಸರ್ವೇಶ್ವರನ ಮಂದಿರದಲ್ಲೆ !


ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಆಗ ಯೇಸು, “ಇವುಗಳನ್ನೆಲ್ಲಾ ನೀವು ನೋಡುತ್ತಾ ಇದ್ದೀರಲ್ಲವೆ? ನಾನು ನಿಮಗೆ ಹೇಳುತ್ತೇನೆ ಕೇಳಿ: ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವರು,” ಎಂದರು.


“ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟು ಸುಂದರ ಆಲಯವನ್ನೂ ಹೃದಯೋಲ್ಲಾಸವಾದ ಅವನ ಗಂಡು ಹೆಣ್ಣುಮಕ್ಕಳನ್ನೂ ನಾನು ನಿರ್ಮೂಲಮಾಡುವ ದಿನದಲ್ಲಿ


ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಸರ್ವೇಶ್ವರನ ಗಾಯನಸೇವೆಗಾಗಿ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿ ಇದ್ದವು. ಇವರು ರಾಜಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡೆಸುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಯನ್ನು ಸಮರ್ಪಿಸಿರಿ; ಅವರ ಅಚಲಪ್ರೀತಿ ಶಾಶ್ವತ” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಯೇಲರೆಲ್ಲರೂ ನಿಂತಿದ್ದರು.


ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.


“ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನನ್ನ ತಂದೆ ದಾವೀದನಿಗೆ ಅವರು ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


“ತಾವು ವಾಗ್ದಾನ ಮಾಡಿದಂತೆ ತಮ್ಮ ಪ್ರಜೆಗಳಾದ ಇಸ್ರಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ತಮ್ಮ ದಾಸ ಮೋಶೆಯ ಮುಖಾಂತರ ಮಾಡಿದ ಅತಿಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ಇದಾದ ಮೇಲೆ, ಎದ್ದುನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ಅರಸನು ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ !


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು