Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 64:7 - ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 64:7
27 ತಿಳಿವುಗಳ ಹೋಲಿಕೆ  

ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ, ಪೌಳಿಯ ಒಡಕಿನಲ್ಲಿ ನಿಲ್ಲುವುದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಿದರೂ ಯಾರೂ ಸಿಕ್ಕಲಿಲ್ಲ.


ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.


ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.


“ಎಲ್ಲರು ಒಲೆಯಂತೆ ಉರಿಯುತ್ತ ತಮ್ಮ ಅಧಿಕಾರಿಗಳನ್ನೇ ನುಂಗಿಬಿಡುತ್ತಾರೆ. ಅವರ ಅರಸರೆಲ್ಲ ಸತ್ತುಬಿದ್ದಿದ್ದಾರೆ. ನನಗೆ ಮೊರೆಯಿಡುವವರು ಅವರಲ್ಲಿ ಯಾರೂ ಇಲ್ಲ.”


ಬದಲಿಗೆ, ನಿಮ್ಮ ಅಪರಾಧಗಳೇ ನಿಮ್ಮನ್ನು ಜೀವದಿಂದ ಬೇರ್ಪಡಿಸುತ್ತಾ ಬಂದಿವೆ. ಅವರು ನಿಮಗೆ ಕಿವಿಗೊಡದಂತೆ ನಿಮ್ಮ ಪಾಪಗಳೇ ಅವರನ್ನು ವಿಮುಖರನ್ನಾಗಿ ಮಾಡಿವೆ.


ತಟ್ಟನೆ ಉಕ್ಕಿ ಹರಿಯುವ ಕೋಪದಿಂದ ಕ್ಷಣಮಾತ್ರ ಮುಖಮರೆಸಿಕೊಂಡೆ ನಿನ್ನಿಂದ ಕರುಣಿಸುವೆನು ನಿನ್ನನು ಶಾಶ್ವತ ಕೃಪೆಯಿಂದ.” ಇಂತೆನ್ನುತಿಹನು ನಿನ್ನ ಉದ್ಧಾರಕ ಸರ್ವೇಶ್ವರ.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಬೇಡವಾದರೆ ಆ ವೈರಿಗಳು ಶರಣಾಗತರಾಗಲಿ, ಬರಲಿ ನನ್ನ ಸಂಗಡ ಸಂಧಾನಕೆ, ಹೌದು, ಬರಲಿ ನನ್ನೊಡನೆ ಸಂಧಾನಕೆ.


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಷವು ಕರಗಿ ಕಿಲುಬು ಇಲ್ಲವಾಗುವಂತೆ, ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.


ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ !


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.


ಅಂಥವನಿಗೆ ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳು : “ಸಬ್ಬತ್‍ದಿನಗಳನ್ನು ನನ್ನ ದಿನಗಳೆಂದು ಆಚರಿಸಿ, ನನಗೆ ಮೆಚ್ಚುಗೆಯಾದುವನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸಿಕೊಂಡು ಬರುವ ನಪುಂಸಕರಿಗೆ,


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I


ಬಹುಶಃ ನಿನ್ನ ಮಕ್ಕಳು ಆತನ ವಿರುದ್ಧ ಪಾಪಮಾಡಿರಬೇಕು ಎಂದೇ ಆತ ಅವರನು ಆ ದ್ರೋಹದ ನಿಮಿತ್ತ ದಂಡಿಸಿರಬೇಕು.


ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.


ಜೇಡಿಮಣ್ಣಿನಿಂದ ನನ್ನನ್ನು ಮಾಡಿದೆಯೆಂದು ನೆನೆಸಿಕೊ ಆದರೆ ಈಗ ಮರಳಿ ಮಣ್ಣಾಗುವಂತೆ ಮಾಡುವಿಯೋ?


ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II


ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?


ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು