Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ - ಇಗೋ, ನಾನಿದ್ದೇನೆ ನಾನಿದ್ದೇನೆ ಎನ್ನುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದೇನೆಂದರೆ, “ನನ್ನ ಆಲೋಚನೆಯನ್ನು ಕೇಳಲು ಬಾರದೆ ಹೋದ ಜನರಿಗೂ ನಾನು ಸಹಾಯ ಮಾಡಿದೆನು. ನನ್ನನ್ನು ಹುಡುಕದವರಿಗೂ ಸಿಕ್ಕಿದೆನು. ನನ್ನ ಹೆಸರನ್ನು ಧರಿಸದ ಜನಾಂಗದೊಡನೆ ನಾನು ಮಾತನಾಡಿದೆನು. ಅವರಿಗೆ, ‘ನಾನಿಲ್ಲಿದ್ದೇನೆ! ನಾನಿಲ್ಲಿದ್ದೇನೆ!’ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ. ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ, ‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:1
20 ತಿಳಿವುಗಳ ಹೋಲಿಕೆ  

ಯೆಶಾಯನು ಮತ್ತಷ್ಟು ದಿಟ್ಟತನದಿಂದ ಈ ರೀತಿ ಹೇಳಿದ್ದಾನೆ: “ನನ್ನನ್ನು ಅರಸದವರಿಗೂ ನಾನು ಕಾಣಿಸಿಕೊಂಡೆ ನನ್ನ ಬಗ್ಗೆ ವಿಚಾರಿಸದವರಿಗೂ ನಾನು ಪ್ರತ್ಯಕ್ಷನಾದೆ.”


ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಇಸ್ರಯೇಲರಾದರೋ ದೇವರೊಡನೆ ಸತ್ಸಂಬಂಧವನ್ನು ದೊರಕಿಸುವ ಧರ್ಮವನ್ನು ಅರಸುತ್ತಿದ್ದರೂ ಅದನ್ನು ಕಂಡುಹಿಡಿದಿಲ್ಲ.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ನಾವಾದರೋ, ನಿಮ್ಮ ದೊರೆತನಕ್ಕೆ ಎಂದಿಗೂ ಒಳಗಾಗದ, ನಿಮ್ಮ ನಾಮವನ್ನು ಧರಿಸದ, ಪರಕೀಯರಂತೆ ಆಗಿದ್ದೇವಲ್ಲಾ !


ಕೇಳಿ, ಇದನ್ನು ಮೊದಲು ತಿಳಿಸಿದವನು ನಾನೇ ಸಿಯೋನಿಗೆ; ಶುಭಸಂದೇಶಕ ದೂತನನ್ನು ಕಳುಹಿಸಿದವನು ನಾನೇ ಜೆರುಸಲೇಮಿಗೆ.


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ಸೌಲ ಹಿಂದಿರುಗಿ ನನ್ನನ್ನು ಕರೆದರು.


ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು, “ನೋಡಮ್ಮ, ನೀನು ವ್ಯಾಧಿಯಿಂದ ಬಿಡುಗಡೆಯಾದೆ,” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು