Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:15 - ಕನ್ನಡ ಸತ್ಯವೇದವು C.L. Bible (BSI)

15 ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ.” ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:15
23 ತಿಳಿವುಗಳ ಹೋಲಿಕೆ  

ನೋಡುವರು ಜನಾಂಗಗಳು ನಿನ್ನ ಸದ್ಧರ್ಮವನು ಕಾಣುವರು ಸಕಲ ರಾಜರು ನಿನ್ನ ವೈಭವವನು ಪಡೆಯುವೆ ನೀನು ಸರ್ವೇಶ್ವರನೇ ಕೊಟ್ಟ ಹೊಸ ಹೆಸರನು.


“ ‘ನೀವು ನನ್ನ ಜನರಲ್ಲ’ ಎಂದು ಯಾವ ಸ್ಥಳದಲ್ಲಿ ಬರೆಯಲಾಗಿತ್ತೋ ಅದೇ ಸ್ಥಳದಲ್ಲಿ ‘ಅವರನ್ನು ಜೀವಂತ ದೇವರ ಮಕ್ಕಳು ಎಂದು ಕರೆಯಲಾಗುವುದು.’ “


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”


ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು.


ತಾವು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಾಗಲಿ, ತಾವು ನೆಟ್ಟ ತೋಟಗಳ ಫಲವನ್ನು ಬೇರೆಯವರು ಅನುಭವಿಸುವುದಾಗಲಿ ಇನ್ನು ಸಂಭವಿಸದು. ಏಕೆಂದರೆ, ನನ್ನ ಜನರು ಮರಗಳಂತೆ ಬಹುಕಾಲ ಬಾಳುವರು. ನನ್ನಿಂದ ಆಯ್ಕೆಯಾದವರು ತಮ್ಮ ದುಡಿಮೆಯ ಫಲವನ್ನು ದೀರ್ಘಕಾಲ ಅನುಭವಿಸುವರು.


ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


“ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು.


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ವೈರಿಗಳು ದಿನವಿಡೀ ನನ್ನ ನಿಂದಿಸುತ್ತಿಹರು I ದ್ವೇಷಿಗಳು ನನ್ನ ಹೆಸರೆತ್ತಿ ಶಪಿಸುತ್ತಿಹರು II


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ಜೆರುಸಲೇಮಿಗೂ ಜುದೇಯದ ನಗರಗಳಿಗೂ, ಅರಸರುಗಳಿಗೂ ಕುಡಿಸಿದೆ. ಇದರಿಂದ ಅವರು ಹಾಳಾಗಿ ಇಂದು ಪರಿಹಾಸ್ಯಕ್ಕೂ ಶಾಪಕ್ಕೂ ಗುರಿಯಾಗುವಂತಾಯಿತು.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”


ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’


ಈಜಿಪ್ಟಿಗೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಆ ಜುದೇಯದ ಅಳಿದುಳಿದ ಜನರನ್ನು ನಾಶಮಾಡುವೆನು. ಈಜಿಪ್ಟಿನಲ್ಲೆ ಅವರು ಮಣ್ಣುಪಾಲಾಗುವರು. ಖಡ್ಗ-ಕ್ಷಾಮಗಳಿಂದ ಅಳಿದುಹೋಗುವರು. ಚಿಕ್ಕವರು-ದೊಡ್ಡವರು ಎನ್ನದೆ ಖಡ್ಗ-ಕ್ಷಾಮಗಳಿಗೆ ತುತ್ತಾಗಿ, ಅಪವಾದ, ಅಪಹಾಸ್ಯಗಳಿಗೂ ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವರು.


ಅವನಿಗೆ ವಿಮುಖನಾಗಿ ಅವನ ದುರ್ಗತಿಯು ಎಚ್ಚರಿಕೆಗೆ ಗುರುತಾಗಿಯೂ ಕಟ್ಟುಗಾದೆಗಳಿಗೆ ವಸ್ತುವಾಗಿಯೂ ಆಗುವಂತೆ ಮಾಡುವೆನು; ಅವನನ್ನು ನನ್ನ ಜನರಿಂದ ಹೊರಹಾಕುವೆನು; ಹೀಗೆ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು