Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:22 - ಕನ್ನಡ ಸತ್ಯವೇದವು C.L. Bible (BSI)

22 ತಾವು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಾಗಲಿ, ತಾವು ನೆಟ್ಟ ತೋಟಗಳ ಫಲವನ್ನು ಬೇರೆಯವರು ಅನುಭವಿಸುವುದಾಗಲಿ ಇನ್ನು ಸಂಭವಿಸದು. ಏಕೆಂದರೆ, ನನ್ನ ಜನರು ಮರಗಳಂತೆ ಬಹುಕಾಲ ಬಾಳುವರು. ನನ್ನಿಂದ ಆಯ್ಕೆಯಾದವರು ತಮ್ಮ ದುಡಿಮೆಯ ಫಲವನ್ನು ದೀರ್ಘಕಾಲ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಪೂರಾ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇನ್ನು ಮುಂದೆ ಯಾರಾದರೂ ಮನೆಯನ್ನು ಕಟ್ಟಿದರೆ, ಬೇರೆಯವರು ಅದನ್ನು ವಶಮಾಡಿಕೊಂಡು ಅದರಲ್ಲಿ ವಾಸಿಸುವದಿಲ್ಲ. ಇನ್ನು ಮುಂದೆ ಯಾರಾದರೂ ದ್ರಾಕ್ಷಿತೋಟವನ್ನು ಮಾಡಿದರೆ ಅದರ ಫಲವನ್ನು ಇತರರು ತಿನ್ನುವದಿಲ್ಲ. ಮರಗಳು ಎಷ್ಟು ಕಾಲ ಬೆಳೆಯುತ್ತವೋ ಅಷ್ಟುಕಾಲ ನನ್ನ ಜನರು ಜೀವಿಸುವರು. ನಾನು ಆರಿಸಿಕೊಂಡ ಜನರು ತಾವು ಮಾಡಿದ ಕಾರ್ಯಗಳಲ್ಲಿ ಆನಂದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಿಲ್ಲ. ಅವರು ನೆಟ್ಟ ತೋಟದ ಫಲವನ್ನು ಇನ್ನೊಬ್ಬರು ತಿನ್ನುವುದಿಲ್ಲ. ಏಕೆಂದರೆ, ಮರಗಳ ಹಾಗೆ ನನ್ನ ಜನರು ಬಹುಕಾಲ ಬಾಳುವರು. ನಾನು ಆಯ್ದುಕೊಂಡವರು ತಮ್ಮ ಕೈಕೆಲಸಗಳನ್ನು ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:22
12 ತಿಳಿವುಗಳ ಹೋಲಿಕೆ  

ದೀರ್ಘಾಯುಸ್ಸನ್ನಿತ್ತು ತೃಪ್ತಿಪಡಿಸುವೆನು I ನಾನು ನೀಡುವ ಮುಕ್ತಿಯನವನಿಗೆ ಮನಗಾಣಿಸುವೆನು” II


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.


ಸತ್ತಾಗ ಅವನಿಗೆ ಒಟ್ಟು 969 ವರ್ಷಗಳಾಗಿದ್ದವು.


ಸತ್ತಾಗ ಅವನಿಗೆ 930 ವರ್ಷಗಳಾಗಿದ್ದವು.


ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.


ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.


ಬೆಳೆಮಾಡಿದವರೇ ಕಾಳನು ತಿಂದು ಸ್ತುತಿಸುವರು ಸರ್ವೇಶ್ವರನನು; ದ್ರಾಕ್ಷಿ ಕಿತ್ತವರೇ ಕುಡಿವರು ಈ ರಸವನು ನನ್ನಾಲಯದ ಅಂಗಳದೊಳು.”


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು