Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:3 - ಕನ್ನಡ ಸತ್ಯವೇದವು C.L. Bible (BSI)

3 ಈ ಜನರು ತೋಪುಗಳಲ್ಲಿ ಬಲಿಕೊಡುತ್ತಾರೆ. ಇಟ್ಟಿಗೆಯ ಪೀಠಗಳ ಮೇಲೆ ಧೂಪಾರತಿ ಎತ್ತುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈ ಜನರು ವನಗಳಲ್ಲಿ ಯಜ್ಞ ಮಾಡುತ್ತಾ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪಹಾಕುತ್ತಾ ನನ್ನನ್ನು ಯಾವಾಗಲೂ ಕೆಣಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈ ಜನರು ವನಗಳಲ್ಲಿ ಯಜ್ಞಮಾಡುತ್ತಾ ಇಟ್ಟಿಗೆಯ ವೇದಿಯ ಮೇಲೆ ಧೂಪಹಾಕುತ್ತಾ ಗೋರಿಗಳಲ್ಲಿ ಕೂತುಕೊಳ್ಳುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ನನ್ನ ಮುಂದೆ ಯಾವಾಗಲೂ ಇದ್ದು ನನ್ನನ್ನು ರೋಷಗೊಳಿಸಿದರು. ಅವರು ತಮ್ಮ ವಿಶೇಷವಾದ ತೋಟಗಳಲ್ಲಿ ಧೂಪಹಾಕಿ ಬಲಿಯರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇವರು ಯಾವಾಗಲೂ ನನ್ನ ಮುಖದ ಮುಂದೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು. ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಬಲಿಪೀಠದ ಮೇಲೆ ಧೂಪ ಸುಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:3
20 ತಿಳಿವುಗಳ ಹೋಲಿಕೆ  

ನೀವು ಬಯಸಿದ ಎಲ್ಲಾ ಮರಗಳನ್ನು ಪೂಜಿಸಿದ್ದಕ್ಕಾಗಿ ಹೇಸುವಿರಿ: ಪವಿತ್ರ ವನಗಳನ್ನು ನಿರ್ಮಿಸಿದ್ದಕ್ಕಾಗಿ ನಾಚಿಕೆಪಡುವಿರಿ.


“ತಮ್ಮ ಮಧ್ಯಸ್ಥನ ಮಾತಿನ ಪ್ರಕಾರ, ತೋಪುಗಳನ್ನು ಪ್ರವೇಶಿಸಿ, ಒಬ್ಬನ ಹಿಂದೊಬ್ಬರು ತಮ್ಮನ್ನೇ ಶುದ್ಧೀಕರಿಸಿ, ಪವಿತ್ರೀಕರಿಸಿಕೊಂಡು, ಹಂದಿಯ ಮಾಂಸವನ್ನೂ ಅಸಹ್ಯಪದಾರ್ಥಗಳನ್ನೂ ಇಲಿಗಳನ್ನೂ ತಿನ್ನುವ ಜನರು ಒಟ್ಟಿಗೇ ಕೊನೆಗಾಣುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ. ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು.


‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.


ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು.


ನೀವೀಗ ಕೈಚಾಚಿ ಯೋಬನ ಮೂಳೆಮಾಂಸಗಳನ್ನು ಮುಟ್ಟಿನೋಡಿ; ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ದೂಷಿಸುತ್ತಾನೋ ಇಲ್ಲವೋ ನೀವೇ ನೋಡುವಿರಂತೆ,” ಎಂದನು.


ಏಕೆಂದರೆ ಬಲಿಪ್ರಾಣಿಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು ಸರ್ವೇಶ್ವರನ ಮುಂದೆ ಶಾಂತಿಸಮಾಧಾನದ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.


ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ಎಷ್ಟೋ ಸಾರಿ ಅವಿಧೇಯರಾಗಿ ನಡೆದುಕೊಂಡರು ಅರಣ್ಯದಲಿ I ಎಷ್ಟೋ ಸಾರಿ ಆತನ ಮನನೋಯಿಸಿದರು ಮರುಭೂಮಿಯಲಿ II


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.


“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು