Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 65:9 - ಕನ್ನಡ ಸತ್ಯವೇದವು C.L. Bible (BSI)

9 ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಕೋಬಿನಿಂದ ಸಂತಾನವನ್ನು ಹೊರಪಡಿಸುವೆನು, ಯೆಹೂದವಂಶದಿಂದ ನನ್ನ ಪರ್ವತಗಳ ಸ್ವಾಸ್ತ್ಯದ ಬಾಧ್ಯಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವಾಸ್ತ್ಯವನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಯಾಕೋಬನ ಜನರಲ್ಲಿ ಕೆಲವರನ್ನು ಉಳಿಸುವೆನು. ಯೆಹೂದದ ಕೆಲವರು ನನ್ನ ಪರ್ವತವನ್ನು ಪಡೆದುಕೊಳ್ಳುವರು. ನನ್ನ ಸೇವಕರು ಅಲ್ಲಿ ವಾಸಿಸುವರು. ಅಲ್ಲಿ ವಾಸಿಸಬೇಕಾದವರನ್ನು ನಾನೇ ಆರಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಾಕೋಬಿನೊಳಗಿಂದ ಒಂದು ಸಂತಾನವನ್ನೂ, ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನು ಹೊರಗೆ ಬರಮಾಡುವೆನು. ನಾನು ಆಯ್ದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ನನ್ನ ಸೇವಕರು ಅದರಲ್ಲಿ ವಾಸವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 65:9
25 ತಿಳಿವುಗಳ ಹೋಲಿಕೆ  

ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ.


ಶುಭಸಂದೇಶವನ್ನು ತಿರಸ್ಕರಿಸಿದ್ದರಿಂದ ಇಸ್ರಯೇಲರು ದೇವರಿಗೆ ಶತ್ರುಗಳಾದರು. ಹೀಗಾದುದು ನಿಮ್ಮ ಹಿತಕ್ಕೋಸ್ಕರವೆ. ದೇವರಿಂದ ಆಯ್ಕೆ ಆದವರಾದರಿಂದ, ಪಿತಾಮಹ ಅಬ್ರಹಾಮ್, ಇಸಾಕ್ ಮತ್ತು ಯಕೋಬರ ನಿಮಿತ್ತ ಅವರು ದೇವರಿಗೆ ಮಿತ್ರರಾದರು.


ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.


ಕರೆದು ತರುವೆನು ನಿಮ್ಮನ್ನು ಆ ಕಾಲದೊಳು ಮರಳಿಸುವೆನು ಮನೆಗೆ ಆ ದಿನದೊಳು. ಹಿಂದಿನ ಸಮೃದ್ಧಿಯನ್ನು ಬರಮಾಡುವೆನು ನಿನ್ನ ಕಣ್ಮುಂದೆ ದೊರಕುವುದಾಗ ನಿನಗೆ ಸ್ತುತಿಕೀರ್ತಿ ಜನಾಂಗಗಳ ಮುಂದೆ.” - ಸರ್ವೇಶ್ವರಸ್ವಾಮಿಯ ನುಡಿಯಿದು.


ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು.


ತಾವು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಾಗಲಿ, ತಾವು ನೆಟ್ಟ ತೋಟಗಳ ಫಲವನ್ನು ಬೇರೆಯವರು ಅನುಭವಿಸುವುದಾಗಲಿ ಇನ್ನು ಸಂಭವಿಸದು. ಏಕೆಂದರೆ, ನನ್ನ ಜನರು ಮರಗಳಂತೆ ಬಹುಕಾಲ ಬಾಳುವರು. ನನ್ನಿಂದ ಆಯ್ಕೆಯಾದವರು ತಮ್ಮ ದುಡಿಮೆಯ ಫಲವನ್ನು ದೀರ್ಘಕಾಲ ಅನುಭವಿಸುವರು.


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”


ನನ್ನ ಜನರು ಶಾಂತಿಸದನಗಳಲ್ಲಿಯೂ ನಿರ್ಭಯವಾದ ನಿಲಯಗಳಲ್ಲಿಯೂ ನೆಮ್ಮದಿಯಾಗಿರುವ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.


ಸಹಾಯಕ್ಕಾಗಿ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಈ ವಿಗ್ರಹಗಳೇ ನಿನಗೆ ರಕ್ಷಣೆ ನೀಡಲಿ. ಇವುಗಳನ್ನೆಲ್ಲ ಗಾಳಿ ಬಡಿದುಕೊಂಡು ಹೋಗುವುದು. ಕೇವಲ ಒಂದು ಉಸಿರು ಸಾಕು, ಇವುಗಳನ್ನು ಒಯ್ದುಬಿಡಲು. ಆದರೆ ನನ್ನನ್ನು ಆಶ್ರಯಿಸಿಕೊಂಡವನು ನಾಡಿಗೆ ಬಾಧ್ಯಸ್ಥನಾಗುವನು; ನನ್ನ ಪವಿತ್ರ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವನು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು