Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 66:15 - ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿಜ್ವಾಲೆಯಿಂದ ಖಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ. ಯೆಹೋವನು ತನ್ನ ಕೋಪದಿಂದ ಆ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 66:15
33 ತಿಳಿವುಗಳ ಹೋಲಿಕೆ  

ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ಚಲಿಸುತ್ತಿದೆ ಬೆಂಕಿ ಆತನ ಮುಂದುಗಡೆ I ಸುಡುತ್ತದೆ ಆತನ ವೈರಿಗಳನು ಎಲ್ಲೆಡೆ II


ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಜುದೇಯದವರಿಗೂ ಜೆರುಸಲೇಮಿನವರಿಗೂ ಸರ್ವೇಶ್ವರ ಹೇಳುವುದೇನೆಂದರೆ - “ಪಾಳುಬಿದ್ದ ನಿಮ್ಮ ಹೊಲಗದ್ದೆಗಳನ್ನು ಉತ್ತು ಹದಮಾಡಿ, ಮುಳ್ಳುಗಳ ನಡುವೆ ಬಿತ್ತಬೇಡಿ.


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


“ನೀವು ದುರ್ನಡತೆಯುಳ್ಳವರಾಗಿ ಸರ್ವೇಶ್ವರನನ್ನು ಬಿಟ್ಟದ್ದರಿಂದ ಅವರು ನಿಮ್ಮ ಎಲ್ಲ ಪ್ರಯತ್ನಗಳಲ್ಲೂ ವಿಪತ್ತು, ಕಳವಳ, ಶಾಪ, ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವರು.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಚೂಪಾಗಿವೆ ಅವರ ಬಾಣಗಳು; ಬಿಗಿದಿವೆ ಬಿಲ್ಲುಗಳು, ಬೆಣಚುಕಲ್ಲಿನಂತಿವೆ ಕುದುರೆಗಳ ಗೊರಸುಗಳು, ಸುತ್ತುತ್ತಿವೆ ಸುಂಟರಗಾಳಿಯಂತವರ ಚಕ್ರಗಳು.


ಇಸ್ರಯೇಲಿನ ಪರಂಜ್ಯೋತಿಯಾದ ದೇವರು ಅಗ್ನಿಯಂತಾಗುವರು; ಇಸ್ರಯೇಲಿನ ಪರಮಪಾವನ ಸ್ವಾಮಿ ಜ್ವಾಲೆಯಂತಾಗುವರು; ಅದು ಒಂದೇ ಒಂದು ದಿನದಲ್ಲಿ ಅಸ್ಸೀರಿಯರ ಮುಳ್ಳುಪೊದರುಗಳನ್ನೂ ಬಿಡದೆ ಎಲ್ಲವನ್ನೂ ದಹಿಸಿಬಿಡುವುದು.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.


ನಿನ್ನ ಮಕ್ಕಳು ಬಿದ್ದರು ಬೀದಿ ಚೌಕಗಳಲಿ ಬಲೆಗೆ ಬಿದ್ದ ಜಿಂಕೆಮರಿಯಂತಿಹರು ಪ್ರಜ್ಞೆತಪ್ಪಿ. ನಿನ್ನ ದೇವರನು ಮೂದಲಿಸಿಹರು ಸರ್ವೇಶ್ವರನ ರೋಷವನ್ನನುಭವಿಸಿಹರು.


ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !


ಆತನ ಕೋಪಾಗ್ನಿಯ ನಿಮಿತ್ತ ಹಾಯಾದ ಗೋಮಾಳಗಳ ಧ್ವಂಸ!


ನಿನ್ನ ಎಪಿಸ್ ಬಸವ ಬಿದ್ದುಹೋದದ್ದೇನು? ಸರ್ವೇಶ್ವರನೆ ಕೆಡವಲು ಅದು ನಿಲ್ಲಲಾರದೆ ಹೋಯಿತು !


“ನಾನು ಕೋಪದಿಂದ, ರೋಷದಿಂದ ಹಾಗು ತೀವ್ರ ಖಂಡನೆಯಿಂದ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ ಪರಿಹಾಸ್ಯಗಳಿಗೂ ಬೆರಗು ಬುದ್ಧಿವಾದಗಳಿಗೂ ಆಸ್ಪದವಾಗುವುವು; ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನನ್ನ ದಾಸರಾದ ಇಸ್ರಯೇಲಿನ ಪ್ರವಾದಿಗಳು ಪುರಾತನಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ ನಾನು ಒಬ್ಬನನ್ನು ಇಸ್ರಯೇಲರ ಮೇಲೆ ಬೀಳಮಾಡುವೆನು, ಎಂದು ಮುಂತಿಳಿಸಿದ್ದರು; ನಾನು ಅವರ ಮುಖಾಂತರ ಮುಂತಿಳಿಸಿದವನು ನೀನೇ ಅಲ್ಲವೇ?’


ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಮೋಡಗಳ ಮೇಲೆ ನೀ ಆಗಮಿಸಿದೆ ಏಕೆ? ಜಯರಥಗಳಲ್ಲಿ ಆಸೀನನಾಗಿ ಬಂದೆ ಏಕೆ? ಸರ್ವೇಶ, ನಿನಗೆ ರೌದ್ರವೇ ನದಿಗಳ ಮೇಲೆ? ಸಿಟ್ಟುಸಿಡುಕವೇ ಹೊಳೆಗಳ ಮೇಲೆ? ರೋಷಾವೇಷವೇ ಸಮುದ್ರದ ಮೇಲೆ?


ಆಕಾಶವನೆ ಬಾಗಿಸಿ ಆತನಿಳಿದು ಬರಲು I ಸೇರಿತು ಆತನ ಕಾಲಡಿ ಕಾರ್ಮುಗಿಲು II


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


ನನಗೆ ಇನ್ನೊಂದು ದರ್ಶನವಾಯಿತು: ಇಗೋ, ಎರಡು ಬೆಟ್ಟಗಳ ನಡುವೆ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅವು ಕಂಚಿನ ಬೆಟ್ಟಗಳಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು