Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 7:2 - ಕನ್ನಡ ಸತ್ಯವೇದವು C.L. Bible (BSI)

2 ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಾಮ್ಯರು ಎಫ್ರಾಯೀಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂಬ ಸುದ್ದಿಯು ದಾವೀದನ ಮನೆಗೆ ಮುಟ್ಟಿದಾಗ ಆಹಾಜನ ಮತ್ತು ಅವನ ಪ್ರಜೆಯ ಹೃದಯವು ಅರಣ್ಯದ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಾಮ್ಯರು ಎಫ್ರಾಯೀಮ್ಯರನ್ನು ಹೊಂದಿಕೊಂಡಿದ್ದಾರೆಂಬ ಸುದ್ದಿಯು ಅರಮನೆಗೆ ಮುಟ್ಟಿದಾಗ ಅರಸನ ಮನವೂ ಪ್ರಜೆಯ ಮನವೂ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾವೀದನ ವಂಶದವರಿಗೆ ಒಂದು ಸಂದೇಶವು ಕಳುಹಿಸಲ್ಪಟ್ಟಿತು, “ಅರಾಮ್ಯರ ಸೈನ್ಯ ಮತ್ತು ಎಫ್ರಾಯೀಮ್ಯರ ಸೈನ್ಯ (ಇಸ್ರೇಲ್) ಒಟ್ಟಾಗಿ ಶಿಬಿರ ಹೂಡಿದ್ದಾರೆ” ಎಂಬುದೇ ಆ ಸಂದೇಶ. ಅರಸನಾದ ಆಹಾಜನು ಈ ಸಂದೇಶವನ್ನು ಕೇಳಿದಾಗ, ಅವನೂ ಅವನ ಜನರೂ ಬಹಳವಾಗಿ ಭಯಹಿಡಿದವರಾದರು. ಅಡವಿಯ ಮರಗಳು ಬಿರುಗಾಳಿಗೆ ತತ್ತರಿಸುತ್ತವೋ ಎಂಬಂತೆ ಅವರು ತತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 7:2
28 ತಿಳಿವುಗಳ ಹೋಲಿಕೆ  

“ಈ ಜನರು ಮಾಡುವ ಕುತಂತ್ರಕ್ಕೆ ಒಳಗಾಗಬೇಡ. ಅವರು ಯಾವುದಕ್ಕೆ ಭಯಪಡುತ್ತಾರೋ ಅದಕ್ಕೆ ನೀನು ಭಯಪಡಬೇಡ, ನಡುಗಲೂ ಬೇಡ.


ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ?


“ಇಟ್ಟಿಗೆಗಳು ಬಿದ್ದುಹೋಗಿವೆ. ಕೆತ್ತನೆ ಕಲ್ಲುಗಳಿಂದ ಮರಳಿ ಕಟ್ಟುವೆವು. ಕಡಿದಿರುವರು ಅತ್ತಿಮರಗಳನ್ನು, ಅಲ್ಲೇ ನೆಡುವೆವು ದೇವದಾರು ವೃಕ್ಷಗಳನ್ನು,” ಎಂದು ಗರ್ವದಿಂದ ಕೊಚ್ಚಿಕೊಳ್ಳುವ


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.


ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು.


“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”


‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.


ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ. ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ.


ದಾವೀದ ಮನೆತನದ ಅಧಿಕಾರವನ್ನು ಅವನ ಹೆಗಲ ಮೇಲೆ ಹೊರಿಸುವೆನು. ಅವನು ತೆರೆದ ಬಾಗಿಲನ್ನು ಯಾರೂ ಮುಚ್ಚರು; ಅವನು ಮುಚ್ಚಿದ ಬಾಗಿಲನ್ನು ಯಾರೂ ತೆರೆಯರು.


ತೊಲಗುವುದು ಎಫ್ರಯಿಮಿನ ಹೊಟ್ಟೆಕಿಚ್ಚು, ನಿರ್ಮೂಲವಾಗುವುದು ಜುದೇಯದ ವೈರಿಗಳ ಒಳಸಂಚು. ಎಫ್ರಯಿಮ್, ಜುದೇಯವನ್ನು ಮತ್ಸರಿಸದು; ಜುದೇಯ, ಎಫ್ರಯಿಮನ್ನು ವಿರೋಧಿಸದು.


ಸರ್ವೇಶ್ವರ ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಭೀಕರ ದಿನಗಳನ್ನು ಬರಮಾಡುವರು. ಇಸ್ರಯೇಲ್ ರಾಜ್ಯ ಜುದೇಯ ನಾಡಿನಿಂದ ಬೇರ್ಪಟ್ಟ ದಿನ ಮೊದಲುಗೊಂಡು ಇದುವರೆಗೂ ಅಂಥ ದಿನಗಳು ಬಂದಿರಲಿಲ್ಲ. ಅಸ್ಸೀರಿಯದ ಅರಸನೇ ಆ ದುರ್ದಿನಗಳ ಪ್ರತೀಕ.


“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.


ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II


ಆಗ ಎಫ್ರಯಿಮರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯ, ಮೆಷಿಲ್ಲೇಮೋತನ ಮಗ ಬೆರೆಕ್ಯ, ಶಲ್ಲೂಮನ ಮಗ ಹಿಜ್ಕೀಯ, ಹದ್ಲೈಯನ ಮಗ ಅಮಾಸ ಎಂಬವರು ಯುದ್ಧದಿಂದ ಬರುತ್ತಿದ್ದವರ ಮುಂದೆ ನಿಂತು,


ಆಗ ಅಮಚ್ಯನು ಎಫ್ರಯಿಮರಿಂದ ಬಂದ ಸೈನಿಕರನ್ನು ಬೇರೆಮಾಡಿ, ಅವರನ್ನು ಅವರ ನಾಡಿಗೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಕಡುಕೋಪಗೊಂಡು, ಬಲುಸಿಟ್ಟಿನಿಂದ ತಮ್ಮ ನಾಡಿಗೆ ಹೋದರು.


ಆ ಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಆ ಪೀಠವನ್ನು ಉದ್ದೇಶಿಸಿ, “ಎಲೈ ಪೀಠವೇ, ಪೀಠವೇ, ದಾವೀದನ ಸಂತಾನದಲ್ಲಿ ಯೋಷೀಯ ಎಂಬೊಬ್ಬನು ಹುಟ್ಟುವನು. ಅವನು, ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಬಲಿಕೊಡುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವುದು ಎಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.


ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ನೋಡಿ ಇಸ್ರಯೇಲರೆಲ್ಲರೂ ಅವನಿಗೆ, “ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ; ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ; ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನವರು ತಮ್ಮ ಕುಲವನ್ನು ತಾವೇ ನೋಡಿಕೊಳ್ಳಲಿ!” ಎಂದು ಹೇಳಿ ತಮ್ಮ ಮನೆಗಳಿಗೆ ಹೊರಟುಹೋದರು.


ತನ್ನ ದಾಸ ದಾವೀದನ ನಿಮಿತ್ತ ಹಾಗು ತಾವು ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ಅವನಿಗೆ ಒಂದೇ ಒಂದು ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾರೆ.


ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”


ಸಿರಿಯ, ಇಸ್ರಯೇಲ್, ಅರಸನಾದ ಪೆಕಹನೊಂದಿಗೆ ಸೇರಿ ಒಳಸಂಚು ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು