Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:14 - ಕನ್ನಡ ಸತ್ಯವೇದವು C.L. Bible (BSI)

14 ನಾನು ನಿನಗೆ ಪವಿತ್ರಾಲಯ ಆಗಿರುವೆನು. ಆದರೆ ಇಸ್ರಯೇಲಿನ ಎರಡು ಕುಲಗಳಿಗೆ ಎಡವುವ ಕಲ್ಲಾಗುವೆನು, ಮುಗ್ಗರಿಸುವ ಬಂಡೆಯಾಗುವೆನು. ಜೆರುಸಲೇಮಿನ ನಿವಾಸಿಗಳನ್ನು ಹಿಡಿಯುವ ಬಲೆಯೂ ಬೋನೂ ಆಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಯೆರೂಸಲೇವಿುನ ನಿವಾಸಿಗಳಿಗೆ ಬಲೆಯೂ ಬೋನೂ ಆಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಯೆಹೋವನನ್ನು ಪರಿಶುದ್ಧನೆಂದು ಪರಿಗಣಿಸಿ ಗೌರವಿಸಿದರೆ, ಆತನು ನಿನಗೆ ಆಶ್ರಯನಾಗುವನು. ಆದರೆ ನೀನು ಆತನನ್ನು ಸನ್ಮಾನಿಸದೆ ಹೋದರೆ ಆತನು ನಿನಗೆ ಮುಗ್ಗರಿಸುವ ಕಲ್ಲಾಗಿ ಪರಿಣಮಿಸುವನು. ಆತನು ಇಸ್ರೇಲಿನ ಎರಡು ಕುಟುಂಬಗಳವರಿಗೆ ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿರುವನು. ಯೆಹೋವನು ಜೆರುಸಲೇಮಿನ ಎಲ್ಲಾ ಜನರನ್ನು ಹಿಡಿಯುವ ಬಲೆಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು. ಆದರೆ ಇಸ್ರಾಯೇಲ್ ಮತ್ತು ಯಹೂದ ಎರಡು ಮನೆಗಳಿಗೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ, ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಬೋನೂ ಆಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:14
24 ತಿಳಿವುಗಳ ಹೋಲಿಕೆ  

“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


“ಆದಕಾರಣ ನೀನು ಹೀಗೆ ಸಾರು; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಾನು ಅವರನ್ನು ದೂರ ಗಡೀಪಾರುಮಾಡಿ, ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದ್ದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.


ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.


ಅವರಿಗೆ ಬಡಿಸಿದ ಊಟವೇ ಅವರಿಗೆ ಉರುಲಾಗಲಿ I ಅವರ ಹಬ್ಬದೌತಣವೇ ಅವರಿಗೆ ಬೋನಾಗಲಿ II


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಅವರಿಗೆ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು,” ಎಂದು ಹೇಳಿದರು.


ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.


ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು? ಹೀಗೆ ಅವರಿಂದ ಪ್ರತಿಫಲ ಪಡೆದವರಾರು?”


ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು.


ಅದು ಹಗಲಿನ ಬಿಸಿಲಲ್ಲಿ ನೆರಳನ್ನೂ ಮಳೆಗಾಳಿ ಬಂದಾಗ ಆಶ್ರಯವನ್ನೂ ಕೊಡುವ ಮಂಟಪವಾಗಿರುವುದು.


ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು’.”


ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ಆ ಮಗು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವುದರೊಳಗೆ, ನೀನು ಯಾವ ಇಬ್ಬರು ಅರಸರುಗಳಿಗೆ ಹೆದರಿ ನಡುಗುತ್ತಿರುವಿಯೋ ಆ ಅರಸರುಗಳ ದೇಶ ನಿರ್ಜನವಾಗುವುದು.


ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ಗೋಡೆಯನ್ನು ತಡವರಿಸುತ್ತೇವೆ ಕುರುಡರಂತೆ, ಹೌದು, ತಡಕಾಡುತ್ತೇವೆ ಕಣ್ಣಿಲ್ಲದವರಂತೆ. ನಡುಹಗಲಲ್ಲೇ ಎಡವುತ್ತೇವೆ ಇಳಿಹೊತ್ತಿನಲ್ಲೋ ಎಂಬಂತೆ. ಸಜೀವದಿಂದಿರುವವರ ನಡುವೆ ಇದ್ದೇವೆ ಸತ್ತವರಂತೆ.


ಆದಕಾರಣ ಈ ಜನರಿಗೆ ಅಡ್ಡಿಆತಂಕಗಳನ್ನು ಒಡ್ಡುವೆನು. ಹೆತ್ತವರೂ ಮಕ್ಕಳೂ ಎಡವಿಬೀಳುವರು, ನೆಂಟರಿಷ್ಟರೂ ನಾಶವಾಗಿ ಹೋಗುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


ಆಗ ಯೆಹೋಶುವ ಎಲ್ಲಾ ಯೋಧರ ಮತ್ತು ಯುದ್ಧವೀರರ ಸಮೇತ ಗಿಲ್ಗಾಲಿನಿಂದ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು