Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:20 - ಕನ್ನಡ ಸತ್ಯವೇದವು C.L. Bible (BSI)

20 ‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ಉಪದೇಶಗಳಿಗೂ ಒಡಂಬಡಿಕೆಗೂ ವಿಧೇಯರಾಗಿರಬೇಕು. ನೀವು ಈ ಆಜ್ಞೆಗಳನ್ನು ಅನುಸರಿಸದಿದ್ದರೆ, ತಪ್ಪು ಆಜ್ಞೆಗಳನ್ನು ಹಿಂಬಾಲಿಸುವಿರಿ. ಬೇತಾಳಿಕರಿಂದ, ಕಣಿಹೇಳುವವರಿಂದ ಬರುವ ಆಜ್ಞೆಗಳೇ ತಪ್ಪು ಆಜ್ಞೆಗಳು. ಅವುಗಳಿಗೆ ಯಾವ ಬೆಲೆಯೂ ಇಲ್ಲ. ಅವುಗಳನ್ನು ಅನುಸರಿಸುವುದರಿಂದ ನಿಮಗೆ ಯಾವ ಪ್ರಯೋಜನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:20
29 ತಿಳಿವುಗಳ ಹೋಲಿಕೆ  

ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ತಾವೇ ಜ್ಞಾನಿಗಳೆಂದುಕೊಚ್ಚಿಕೊಳ್ಳುತ್ತ ಅವರು ನಿಜವಾಗಿಯೂ ಮೂರ್ಖರಾದರು.


ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.”


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ದಿವ್ಯಬೋಧನೆಯನ್ನು ಸುಭದ್ರವಾಗಿ ಇರಿಸು. ಅದನ್ನು ನನ್ನ ಶಿಷ್ಯರಿಗೆ ಉಪದೇಶಮಾಡಿ ಸುರಕ್ಷಿತವಾಗಿರಿಸು.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II


ಈ ಗುಣಗಳಿಲ್ಲದವನು ಸಂಕುಚಿತ ಮನೋಭಾವನೆಯುಳ್ಳವನು ಹಾಗೂ ಅಂಧನು. ಹಿಂದಿನ ಪಾಪಗಳಿಂದ ತಾನು ಶುದ್ಧಗೊಂಡವನು ಎಂಬುದನ್ನು ಮರೆತುಬಿಟ್ಟವನು.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಅಭಿಪ್ರಾಯ ತಪ್ಪು. ಪವಿತ್ರಗ್ರಂಥವನ್ನಾಗಲಿ, ದೇವರ ಶಕ್ತಿಯನ್ನಾಗಲಿ ನೀವು ಅರ್ಥಮಾಡಿಕೊಂಡಿಲ್ಲ.


ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!”


ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು.


ನೇಮವಿತ್ತನು ಯಕೋಬವಂಶಕೆ I ಶಾಸನಕೊಟ್ಟನು ಇಸ್ರಯೇಲರಿಗೆ II ವಿಧಿಸಿದ ನಿಂತು ನಮ್ಮ ಪೂರ್ವಜನರಿಗೆ I “ಕಲಿಸಿರಿ ಇವನ್ನು ನಿಮ್ಮ ಮಕ್ಕಳಿಗೆ” II


ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ನೀನು ಹಾಗು ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರು ಹೇಳಿಕೊಟ್ಟ ಬುದ್ಧಿವಾದಾನುಸಾರ ಅಂಥ ಎಲ್ಲ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ, ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ, ಧರ್ಮಶಾಸ್ತ್ರಕ್ಕನುಸಾರ ನಡೆಯೋಣ.


ಯೇಸು, “ಈ ವಿಷಯವಾಗಿ ಮೋಶೆ ನಿಮಗೆ ಏನೆಂದು ವಿಧಿಸಿದ್ದಾನೆ?” ಎಂದು ಅವರನ್ನೇ ಪುನಃ ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು