Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 8:7 - ಕನ್ನಡ ಸತ್ಯವೇದವು C.L. Bible (BSI)

7 ಆದುದರಿಂದ ಸ್ವಾಮಿಯಾದ ನಾನು ಅಸ್ಸೀರಿಯದ ಅರಸನನ್ನೂ ಅವನ ಚದುರಂಗ ಬಲವನ್ನೂ ಬರಮಾಡುವೆನು: ಅದು ಯೂಫ್ರಟಿಸ್ ಮಹಾನದಿಯ ಪ್ರವಾಹದಂತೆ ರಭಸವಾಗಿ ಹರಿದುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಗೋ, ಕರ್ತನು ಪೂರ್ಣಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನಾದ ನಾನು ನಿಮಗೆ ವಿರುದ್ಧವಾಗಿ ಅಶ್ಶೂರದ ಅರಸನನ್ನೂ ಅವನ ಸಮಸ್ತ ಸೈನ್ಯವನ್ನೂ ತರುವೆನು. ಅವರು ಯೂಫ್ರೇಟೀಸ್ ನದಿಯ ರಭಸದ ಪ್ರವಾಹದ ನೀರಿನಂತೆ ಬರುವರು. ಅವರು ನದಿಯ ದಂಡೆಯ ಮೇಲೆ ಏರಿಬರುವ ನೀರಿನಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರಾದ ನಾನು ಎಲ್ಲಾ ಪ್ರತಾಪದಿಂದ ಕೂಡಿದ ಅಸ್ಸೀರಿಯದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವೆನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 8:7
38 ತಿಳಿವುಗಳ ಹೋಲಿಕೆ  

ಸೇನಾಧಿಶ್ವರ ದೇವರಾದ ಸರ್ವೇಶ್ವರ ಮುಟ್ಟಿದ ಮಾತ್ರಕ್ಕೆ ಕರಗುವುದು ಭೂಮಿ. ಗೋಳಿಡುವುದು ಸಕಲ ಜನತೆ ಉಬ್ಬುವುದು ನಾಡೆಲ್ಲ ನೈಲ್ ನದಿಯಂತೆ ಕುಗ್ಗಿ ಕರಗುವುದು ಈಜಿಪ್ಟಿನ ನದಿಯಂತೆ


ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.


ಆ ದಿನದಂದು ಯೂಫ್ರೆಟಿಸ್ ನದಿಯಾಚೆ ಇರುವ ಅಸ್ಸೀರಿಯದ ರಾಜನೆಂಬ ಹಜಾಮನ ಕತ್ತಿಯಿಂದ ಸರ್ವೇಶ್ವರ ನಿನ್ನ ತಲೆಯನ್ನೂ ಗಡ್ಡವನ್ನೂ ಕಾಲುಗೂದಲನ್ನೂ ಬೋಳಿಸುವರು.


ಸರ್ವೇಶ್ವರ ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಭೀಕರ ದಿನಗಳನ್ನು ಬರಮಾಡುವರು. ಇಸ್ರಯೇಲ್ ರಾಜ್ಯ ಜುದೇಯ ನಾಡಿನಿಂದ ಬೇರ್ಪಟ್ಟ ದಿನ ಮೊದಲುಗೊಂಡು ಇದುವರೆಗೂ ಅಂಥ ದಿನಗಳು ಬಂದಿರಲಿಲ್ಲ. ಅಸ್ಸೀರಿಯದ ಅರಸನೇ ಆ ದುರ್ದಿನಗಳ ಪ್ರತೀಕ.


ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.


ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.


ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.


ಅವನನ್ನು ಎದುರಿಸುವ ದೊಡ್ಡ ದೊಡ್ಡ ಸೈನ್ಯಗಳು ಹಾಗು ದೇವರ ಪ್ರಧಾನ ಯಾಜಕನು ಅವನ ಸೈನ್ಯ ಪ್ರವಾಹಕ್ಕೆ ಸಿಕ್ಕಿ ಅದರಲ್ಲಿ ಮುಳುಗಿ ನಾಶವಾಗುವರು.


ಆಮೇಲೆ ಉತ್ತರರಾಜನ ಮಕ್ಕಳು ಯುದ್ಧಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯ ಬೆಳೆದು ತುಂಬಿತುಳುಕುವ ಪ್ರವಾಹದಂತೆ ಹಬ್ಬಿಕೊಳ್ಳುವುದು. ಅವರು ಮತ್ತೆ ಯುದ್ಧಕ್ಕೆ ಹೊರಟು ದಕ್ಷಿಣರಾಜನ ದುರ್ಗದವರೆಗೆ ನುಗ್ಗುವರು.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.


ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II


ಆಳವಾಗಿ ಅಡಿಪಾಯ ತೆಗೆದು, ಬಂಡೆಕಲ್ಲಿನ ಮೇಲೆ ಅಸ್ತಿವಾರ ಹಾಕಿ, ಮನೆಕಟ್ಟಿದವನಿಗೆ ಅವನು ಸಮಾನನು; ಹುಚ್ಚು ಹೊಳೆ ಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಕದಲಲಿಲ್ಲ. ಕಾರಣ - ಆ ಮನೆಯನ್ನು ಸುಭದ್ರವಾಗಿ ಕಟ್ಟಲಾಗಿತ್ತು.


ದೆಹಾಯರು, ಏಲಾಮ್ಯರು ಹಾಗು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರಿಯ ಪಟ್ಟಣದಲ್ಲಿ ಮತ್ತು ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ:


“ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು: ‘ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ, ಕವಚಧಾರಿಗಳನ್ನು ಕಳುಹಿಸುವುದಿಲ್ಲ. ಅದರ ಆಕ್ರಮಣಕ್ಕಾಗಿ ಮಣ್ಣುದಿಬ್ಬಗಳನ್ನು ಎಬ್ಬಿಸುವುದಿಲ್ಲ.


ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.


ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು.


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


“ಸರ್ವೇಶ್ವರನ ವಾರ್ತೆ ಇದು: ಇಗೋ, ಬಡಗಲಿಂದ ಪ್ರವಾಹ ಹೊರಡುವುದು ತುಂಬಿತುಳುಕುವ ತೊರೆಯಾಗಿ ಬರುವುದು. ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು. ನಗರವನ್ನು, ಅದರ ನಿವಾಸಿಗಳನ್ನು. ಆಗ ನಾಡಿನವರೆಲ್ಲರೂ ಮೊರೆಯಿಡುವರು ದೇಶದವರೆಲ್ಲರು ಗೋಳಾಡುವರು.


ರಾಷ್ಟ್ರಗಳ ಕಣ್ಣಿಗೆ ಬಾಬಿಲೋನ್ ಭೀಕರವಾಗಿಬಿಟ್ಟಿದೆ, ಸಮುದ್ರವೆ ಬಾಬಿಲೋನಿಯದ ಮೇಲೆ ನುಗ್ಗಿಬಿಟ್ಟಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವೆನು.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡುಸಾದುದು. ಅದು ಜುದೇಯಕ್ಕೂ ತಾಕಿದೆ. ಅದು ನನ್ನ ಊರಾದ ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ,” ಎಂದನು.


ಆತನೇ ನಮಗೆ ಶಾಂತಿದಾತನು, ಅಸ್ಸೀರಿಯದವರು ನಮ್ಮ ಮೇಲೆ ದಾಳಿಮಾಡಿ ಆಕ್ರಮಣ ಮಾಡುವಾಗ, ಅವರಿಗೆ ವಿರುದ್ಧ ಏಳುಮಂದಿ ಪಾಲಕರನ್ನು ಹಾಗೂ ಎಂಟುಮಂದಿ ಪುರುಷೋತ್ತಮರನ್ನು ನೇಮಿಸುವೆನು.


ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು