Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:1 - ಕನ್ನಡ ಸತ್ಯವೇದವು C.L. Bible (BSI)

1 ಆದರೂ ಕಷ್ಟಸಂಕಷ್ಟಗಳನ್ನು ಅನುಭವಿಸಿದ ಆ ನಾಡಿಗೆ ಇನ್ನು ಮುಂದೆ ಕತ್ತಲಿರುವುದಿಲ್ಲ. ಒಮ್ಮೆ ಜೆಬುಲೋನ್ ಮತ್ತು ನಪ್ತಾಲಿಯ ಗೋತ್ರಗಳಿಗೆ ಬೀಡಾಗಿದ್ದ ಆ ಪ್ರಾಂತ್ಯವು ಅವಮಾನಕ್ಕೆ ಗುರಿಯಾಗಿತ್ತು. ಆದರೆ ಇನ್ನು ಮುಂದೆ ಅದಕ್ಕೆ ಘನತೆಗೌರವ ಬರುವುದು: ಸಮುದ್ರದ ಹಾದಿಯಿಂದ ಹಿಡಿದು ಜೋರ್ಡನಿನ ಆಚೆಯಲ್ಲಿ ಇರುವ ಪ್ರಾಂತ್ಯದವರೆಗೆ ಮಾತ್ರವಲ್ಲ, ಅನ್ಯಜನರು ಇರುವ ಗಲಿಲೇಯ ಪ್ರಾಂತ್ಯದವರೆಗೂ ಘನತೆಗೌರವ ಬಂದೊದಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು, ಆತನು ಅವಮಾನಕ್ಕೆ ಗುರಿಮಾಡಿದನು. ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯವನ್ನೆಲ್ಲಾ ಘನಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿದನು; ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿಗಿರುವ ಗಲಿಲಾಯ ಸೀಮೆ ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹಿಂದಿನ ಕಾಲದಲ್ಲಿ, ಜೆಬುಲೋನ್ ಮತ್ತು ನಫ್ತಾಲಿ ಪ್ರಾಂತ್ಯಗಳು ವಿಶೇಷವಾದವುಗಳಲ್ಲ ಎಂದು ಜನರು ತಿಳಿದುಕೊಂಡಿದ್ದರು. ಆದರೆ ಆಮೇಲೆ ಸಮುದ್ರಕ್ಕೆ ಸಮೀಪದಲ್ಲಿರುವ ಪ್ರಾಂತ್ಯ, ಜೋರ್ಡನಿನ ಆಚೆಗಿರುವ ಸ್ಥಳ ಮತ್ತು ಯೆಹೂದ್ಯರಲ್ಲದವರು ವಾಸಿಸುವ ಗಲಿಲಾಯ ಪ್ರಾಂತ್ಯ ಇವುಗಳನ್ನು ಮುಂದೆ ದೇವರು ಮಹಾದೇಶವನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದರೂ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬುಲೂನ್ ನಾಡು ಮತ್ತು ನಫ್ತಾಲಿ ನಾಡುಗಳನ್ನು ಅವರು ಅವಮಾನಕ್ಕೆ ಗುರಿಮಾಡಿ, ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಇತರ ಜನರಿರುವ ಗಲಿಲಾಯ ನಾಡು, ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:1
10 ತಿಳಿವುಗಳ ಹೋಲಿಕೆ  

ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.


ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಯೇಲರ ಪಟ್ಟಣಗಳಿಗೆ ವಿರುದ್ಧ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲ ಉಗ್ರಾಣಗಳನ್ನೂ ಹಾಳುಮಾಡಿದರು.


ಆದುದರಿಂದ ಅಸ್ಸೀರಿಯದ ರಾಜಪೂಲ್ (ಇವನಿಗೆ ತಿಲ್ಗತ್ಪಿಲೆಸರ್ ಎಂಬ ಹೆಸರೂ ಇದೆ) ಅವರ ಮೇಲೆ ದಾಳಿಮಾಡುವಂತೆ ಇಸ್ರಯೇಲ್ ದೇವರು ಪ್ರೇರಿಸಿದರು. ಅವನು ರೂಬೇನ್, ಗಾದ್ ಮತ್ತು ಪೂರ್ವದಲ್ಲಿಯ ಮನಸ್ಸೆ ಗೋತ್ರ ಗೋತ್ರಗಳವರನ್ನು ಗಡೀಪಾರು ಮಾಡಿ ಅವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಒಯ್ದನು. ಅವರು ಅಲ್ಲಿಯೇ ನೆಲೆಸುವಂತೆ ಮಾಡಿದನು.


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.


ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು