Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:12 - ಕನ್ನಡ ಸತ್ಯವೇದವು C.L. Bible (BSI)

12 ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರ ಮುಂದೆ ಪೂರ್ವದಿಂದ ಅರಾಮ್ಯರನ್ನು ಮತ್ತು ಅವರ ಹಿಂದೆ ಪಶ್ಚಿಮದಿಂದ ಫಿಲಿಷ್ಟಿಯರನ್ನು ಒಟ್ಟುಗೂಡಿಸುವನು. ಇವರು ಇಸ್ರಾಯೇಲರನ್ನು ಬಾಯಿದೆರೆದು ನುಂಗುವರು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇವರು ಇಸ್ರಾಯೇಲ್ಯರನ್ನು ಬಾಯಿತೆರೆದು ನುಂಗಿದ್ದಾರೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:12
25 ತಿಳಿವುಗಳ ಹೋಲಿಕೆ  

ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಫಿಲಿಷ್ಟಿಯರು ಜುದೇಯದ ಇಳಕಲಿನ ಪ್ರದೇಶದ ಮತ್ತು ದಕ್ಷಿಣಪ್ರಾಂತದ ಪಟ್ಟಣಗಳ ಮೇಲೆ ದಾಳಿಮಾಡಿ ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿ ಇದ್ದರು.


ನುಂಗಿಬಿಟ್ಟರಾ ಜನರು ಯಕೋಬ ವಂಶದವರನು I ಹಾಳುಮಾಡಿ ಬಿಟ್ಟರವರ ನಿವಾಸ ಸ್ಥಳಗಳನು II


ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಸಿರಿಯಾ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸಿದರು. ಇಂದಿನವರೆಗೂ ಅದರಲ್ಲಿ ಅವರೇ ವಾಸವಾಗಿದ್ದಾರೆ.


ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.


ಖೈದಿಗಳೊಂದಿಗೆ ಕಾರಾಗೃಹವನ್ನು ಸೇರುವಿರಿ; ಇಲ್ಲವೆ, ಇತರರ ಸಮೇತ ಹತರಾಗುವಿರಿ. ಇದೇ ನಿಮ್ಮ ಗತಿ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಮನಸ್ಸೆ ಎಫ್ರಯಿಮನ್ನು ಎಫ್ರಯಿಮ್ ಮನಸ್ಸೆಯನ್ನು ಕಬಳಿಸುತ್ತದೆ. ಇವೆರಡೂ ಸೇರಿ ಜುದೇಯಕ್ಕೆ ವಿರುದ್ಧವಾಗಿ ಎದ್ದು ನಿಂತಿವೆ. ಇಷ್ಟಾದರೂ ಸಹ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಆದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಈ ನಾಡಿಗೆ ಮುತ್ತಿಗೆ ಹಾಕಿದಾಗ, ಬಾಬಿಲೋನಿಯ ಮತ್ತು ಸಿರಿಯದವರ ಸೈನ್ಯಗಳಿಂದ ತಪ್ಪಿಸಿಕೊಳ್ಳಲು, ‘ಜೆರುಸಲೇಮಿಗೆ ಹೋಗೋಣ ಬನ್ನಿ’ ಎಂದುಕೊಂಡು ಬಂದೆವು. ಈ ಕಾರಣದಿಂದಲೇ ಇಲ್ಲಿ ವಾಸಿಸುತ್ತಿದ್ದೇವೆ,” ಎಂದು ಹೇಳಿದರು.


ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.


ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


“ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆ; ನಿನ್ನನ್ನು ದ್ವೇಷಿಸಿ, ನಿನ್ನ ಕೆಟ್ಟನಡತೆಗೆ ಅಸಹ್ಯಪಡುವ ಪಿಲಿಷ್ಟಿಯ ಕುವರಿಯರ ಕೈಗೆ ನಿನ್ನನ್ನು ಒಪ್ಪಿಸಿದೆ.


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ನನ್ನ ಜನರನ್ನು ನಾಡಿನ ಉಕ್ಕಡಗಳಲ್ಲಿ ಮೊರದಿಂದ ಗಾಳಿಗೆ ತೂರಿಬಿಟ್ಟೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸಿದೆನು. ಏಕೆಂದರೆ, ಅವರು ತಮ್ಮ ದುರ್ಮಾರ್ಗದಿಂದ ಹಿಂದಿರುಗದೆ ಹೋದರು.


ಇಸ್ರಯೇಲಿನ ಅಹಂಕಾರವೇ ಅದರ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಷ್ಟೆಲ್ಲ ಸಂಭವಿಸಿದರೂ ಅದು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗುವುದಿಲ್ಲ; ಅವರನ್ನು ಆಶ್ರಯಿಸುವುದಿಲ್ಲ.


“ನಿಮ್ಮ ಪಟ್ಟಣಗಳಲ್ಲಿ ಹೊಟ್ಟೆಗೆ ಹಿಟ್ಟಿಲ್ಲದಂತೆ ಮಾಡಿದವನು ನಾನೇ. ನೀವು ಹೋದೆಡೆಗಳಲ್ಲೆಲ್ಲ ನಿಮಗೆ ರೊಟ್ಟಿ ಸಿಗದಂತೆ ಮಾಡಿದವನು ನಾನೇ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ


ಹಲವಾರು ಊರಿನವರು ಕುಡಿಯುವ ನೀರಿಗಾಗಿ ಪರದಾಡುತ್ತಾ ಪಕ್ಕದ ಪಟ್ಟಣಕ್ಕೆ ಹೋದರೂ ಅವರ ದಾಹವು ಇಂಗಲಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು