Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 9:2 - ಕನ್ನಡ ಸತ್ಯವೇದವು C.L. Bible (BSI)

2 ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು, ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಗ ಅವರು ಕತ್ತಲಲ್ಲಿ ವಾಸಿಸುವರು. ಆದರೆ ಒಂದು ದೊಡ್ಡ ಬೆಳಕನ್ನು ಅವರು ನೋಡುವರು. ಅವರಿರುವ ಸ್ಥಳವು ಮರಣದ ಸ್ಥಳದಂತೆ ಅಂಧಕಾರದಿಂದ ತುಂಬಿದೆ. ಆದರೆ ದೊಡ್ಡ ಬೆಳಕು ಅವರ ಮೇಲೆ ಪ್ರಕಾಶಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕತ್ತಲೆಯಲ್ಲಿ ನಡೆಯುವ ಈ ಜನರಿಗೆ ಮಹಾ ಬೆಳಕು ಕಾಣಿಸಿತು, ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಉದಯಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 9:2
22 ತಿಳಿವುಗಳ ಹೋಲಿಕೆ  

ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”


ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.


ದೇವರಾಜ್ಞೆಯನು ವಿರೋಧಿಸಿದ ಕಾರಣ I ಪರಾತ್ಪರನಾಜ್ಞೆಯನು ಹೀಗಳೆದ ಕಾರಣ II


ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ಕತ್ತಲು, ಕಗ್ಗತ್ತಲಿಂದವರನು ಹೊರತಂದನು I ಅವರ ಬೇಡಿಬಂಧನಗಳನು ಮುರಿದುಹಾಕಿದನು II


ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.


ಆದರೂ ಕಷ್ಟಸಂಕಷ್ಟಗಳನ್ನು ಅನುಭವಿಸಿದ ಆ ನಾಡಿಗೆ ಇನ್ನು ಮುಂದೆ ಕತ್ತಲಿರುವುದಿಲ್ಲ. ಒಮ್ಮೆ ಜೆಬುಲೋನ್ ಮತ್ತು ನಪ್ತಾಲಿಯ ಗೋತ್ರಗಳಿಗೆ ಬೀಡಾಗಿದ್ದ ಆ ಪ್ರಾಂತ್ಯವು ಅವಮಾನಕ್ಕೆ ಗುರಿಯಾಗಿತ್ತು. ಆದರೆ ಇನ್ನು ಮುಂದೆ ಅದಕ್ಕೆ ಘನತೆಗೌರವ ಬರುವುದು: ಸಮುದ್ರದ ಹಾದಿಯಿಂದ ಹಿಡಿದು ಜೋರ್ಡನಿನ ಆಚೆಯಲ್ಲಿ ಇರುವ ಪ್ರಾಂತ್ಯದವರೆಗೆ ಮಾತ್ರವಲ್ಲ, ಅನ್ಯಜನರು ಇರುವ ಗಲಿಲೇಯ ಪ್ರಾಂತ್ಯದವರೆಗೂ ಘನತೆಗೌರವ ಬಂದೊದಗುವುದು.


ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,


ಮರಳಿ ಹಿಂದಿರುಗಲಾಗದ ನಾಡನು ನಾನು ಸೇರಲಿರುವೆ ಅಂಧಕಾರವೂ ಗಾಢಾಂಧಕಾರವೂ ಅಲ್ಲಿ ತುಂಬಿವೆ.


‘ನಿಶ್ಚಯವಾಗಿ ಸಿಕ್ಕಿರಬೇಕು ಅವರಿಗೆ ಕೊಳ್ಳೆ ಹಂಚಿಕೊಳ್ಳುತ್ತಿರಬೇಕು ಅದನು ತಮ್ಮತಮ್ಮಲ್ಲೆ ಪ್ರತಿಯೊಬ್ಬ ಸೈನಿಕನಿಗೆ ಒಬ್ಬೊಬ್ಬ ದಾಸಿಯರು ಸೀಸೆರನಿಗೊ, ಬಣ್ಣಬಣ್ಣವಾದ ಬಟ್ಟೆಬರೆಗಳು ವಿಚಿತ್ರ ಕಸೂತಿಹಾಕಿದ ಒಂದೆರಡು ವಸ್ತ್ರಗಳು, ಕಂಠಮಾಲೆಗಳು’.


ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು