Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:22 - ಕನ್ನಡ ಸತ್ಯವೇದವು C.L. Bible (BSI)

22 ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು. ಅವು ಆ ಮುಖಗಳೇ. ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ನೇರವಾಗಿಯೇ ಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಕೆಬಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:22
9 ತಿಳಿವುಗಳ ಹೋಲಿಕೆ  

ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರು ಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.


ಅವುಗಳ ಮುಖ ಲಕ್ಷಣಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖ ಮನುಷ್ಯ ಮುಖದಂತಿತ್ತು; ಬಲಗಡೆಯ ಮುಖ ಸಿಂಹನಂತಿತ್ತು; ಎಡಗಡೆಯ ಮುಖ ಹೋರಿಯ ಮುಖದಂತಿತ್ತು; ಹಿಂದಿನ ಮುಖ ಗರುಡ ಪಕ್ಷಿಯ ಮುಖದಂತಿತ್ತು.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಆ ಜೀವಿಗಳೆಲ್ಲ ಹೊರಟ ಮುಖವಾಗಿಯೇ ಹೋಗುತ್ತಿದ್ದವು; ಹಿಂದಿರುಗಿನೋಡದೆ, ದೇವರಾತ್ಮ ಸಾಗಿಸಿದ ಕಡೆಗೇ ಸಾಗುತ್ತಿದ್ದವು.


ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.


ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಹಿಂತಿರುಗಿ ನೋಡದೆ ಹೊರಟ ಮುಖವಾಗಿಯೇ ಹೋಗುತ್ತಿದ್ದವು.


ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯಹಸ್ತದಂಥ ಹಸ್ತಗಳು ಇದ್ದವು;


ಆಮೇಲೆ ದೇವರಾತ್ಮ ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಸರ್ವೇಶ್ವರನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು. ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು. ಅವರ ಮಧ್ಯೆ ಅಜ್ಜೂರನ ಮಗ ಯಾಜನ್ಯ, ಬೆನಾಯನ ಮಗ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.


ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು. ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದ‍ನ್ನು ಕಂಡೆನೋ ಅಂಥದನ್ನೇ ಕಂಡೆನು. ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತ ದರ್ಶನದಂಥ ದರ್ಶನ ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು