Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:4 - ಕನ್ನಡ ಸತ್ಯವೇದವು C.L. Bible (BSI)

4 ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಅಂಗಳದಲ್ಲೆಲ್ಲಾ ವ್ಯಾಪಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಪ್ರಾಕಾರದಲ್ಲೆಲ್ಲಾ ವ್ಯಾಪಿಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಬಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:4
15 ತಿಳಿವುಗಳ ಹೋಲಿಕೆ  

ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.


ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ,


ದೇವರ ಸಾನ್ನಿಧ್ಯದ ತೇಜಸ್ಸು ಮತ್ತು ಪ್ರಭಾವಗಳು ದೇವಾಲಯವನ್ನು ಧೂಮದಿಂದ ತುಂಬಿದವು. ಇದರಿಂದಾಗಿ, ಆ ಏಳು ದೇವದೂತರು ತಂದ ಏಳು ವಿಪತ್ತುಗಳು ಮುಗಿಯುವ ತನಕ ಆ ದೇವಾಲಯವನ್ನು ಪ್ರವೇಶಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.


ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು.


ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವುದರಿಂದಲೂ ಸರ್ವೇಶ್ವರನ ತೇಜಸ್ಸು ಗುಡಾರದೊಳಗೆ ತುಂಬಿದ್ದುದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು.


ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ಶ್ರೇಷ್ಠವಾಗಿರುವುದು. ಈ ಸ್ಥಳದಲ್ಲಿ ಶಾಂತಿ ಸಮೃದ್ಧಿಯನ್ನು ಅನುಗ್ರಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ದೇವರಾತ್ಮ ನನ್ನನ್ನು ಎತ್ತಿ ಒಳಗಿನ ಪ್ರಾಕಾರಕ್ಕೆ ತಂದಿತು. ಆಗ ಏನಾಶ್ಚರ್ಯ! ಸರ್ವೇಶ್ವರನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.


ಬಳಿಕ ಕೋರಹನು ಸಮುದಾಯದವರೆಲ್ಲರನ್ನು ತಮಗೆದುರಾಗಿ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿದನು. ಆಗ ಸರ್ವೇಶ್ವರನ ತೇಜಸ್ಸು ಸಮುದಾಯದವರೆಲ್ಲರಿಗೆ ಹೊಳೆಯಿತು.


ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು.


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.


ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.


ಬಳಿಕ ಆ ಪುರಷನು ಉತ್ತರ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರೆದುತಂದನು; ಏನಾಶ್ಚರ್ಯ! ನಾನು ನೋಡುತ್ತಿದ್ದಂತೆ ಸರ್ವೇಶ್ವರನ ತೇಜಸ್ಸು ದೇವಾಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು