Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:12 - ಕನ್ನಡ ಸತ್ಯವೇದವು C.L. Bible (BSI)

12 ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಗೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ ನನ್ನ ನಿಯಮಗಳನ್ನು ಅನುಸರಿಸದೆ ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ. ನನ್ನ ಆಜ್ಞೆಗೆ ನೀವು ಅವಿಧೇಯರಾದಿರಿ. ನನ್ನ ಕಟ್ಟಳೆಗಳಿಗೆ ನೀವು ವಿಧೇಯರಾಗಲಿಲ್ಲ. ನಿಮ್ಮ ಸುತ್ತಲೂ ಇರುವ ಜನಾಂಗಗಳಂತೆ ಇರಲು ನೀವು ನಿರ್ಧರಿಸಿರುತ್ತೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಏಕೆಂದರೆ ನೀವು ನನ್ನ ನಿಯಮಗಳಂತೆ ನಡೆಯಲಿಲ್ಲ. ನನ್ನ ನ್ಯಾಯವಿಧಿಗಳನ್ನು ಪಾಲಿಸಲಿಲ್ಲ. ಆದರೆ ನಿಮ್ಮ ಸುತ್ತಲಿರುವ ಇತರ ಜನಾಂಗಗಳ ಆಚಾರಗಳ ಪ್ರಕಾರ ಮಾಡಿದ್ದೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:12
35 ತಿಳಿವುಗಳ ಹೋಲಿಕೆ  

ಅಕಟಾ, ಎಲ್ಲಾ ಜಾತಿಯ ಕ್ರಿಮಿಕೀಟಗಳು, ಅಸಹ್ಯ ಮೃಗಗಳು ಹಾಗು ಇಸ್ರಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳು ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.


ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.


ನನ್ನನ್ನು ಸರ್ವೇಶ್ವರನ ಆಲಯದ ಉತ್ತರ ಬಾಗಿಲ ಮುಂದಕ್ಕೆ ಕರೆತಂದರು; ಇಗೋ, ಅಲ್ಲಿ ಹೆಂಗಸರು ‘ತಮ್ಮೂಜ್’ ದೇವತೆಗಾಗಿ ಅಳುತ್ತಾ ಕುಳಿತಿದ್ದರು.


ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲ. ಅವರ ದಾಸರಾದ ಪ್ರವಾದಿಗಳ ಮುಖಾಂತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.


ಆದ್ದರಿಂದ ನಾನು ‘ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು’ ಎಂದು ಮರುಭೂಮಿಯಲ್ಲಿ ಪ್ರಮಾಣಮಾಡಿ ಹೇಳಿದೆ.


“ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.


ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.


ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಗೊಂಡು, ಸತ್ಯಪರನಾಗಿಯೇ ನಡೆದರೆ, ಇಂಥವನು ಸದ್ಧರ್ಮಿ. ಆದುದರಿಂದ ಅವನು ಜೀವಿಸುವುದು ನಿಶ್ಚಯ. ಇದು ಸರ್ವೇಶ್ವರನಾದ ದೇವರ ನುಡಿ:


ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”


“ಅನ್ಯಜನಾಂಗಗಳ ಆಚರಣೆಯನ್ನು ಅನುಸರಿಸಬೇಡಿ ಅವರು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿ.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ಪಾಲಿಸಲಿಲ್ಲ ಅವರು ದೇವರ ನಿಬಂಧನೆಯನು I ಅನುಸರಿಸಲಿಲ್ಲ ಆತನ ಧರ್ಮಶಾಸ್ತ್ರವನು II


ನಮ್ಮ ಅರಸರು, ರಾಜ್ಯಪಾಲರು, ಯಾಜಕರು, ಹಿರಿಯರು ಅನುಸರಿಸಲಿಲ್ಲ, ನಿಮ್ಮಾಜ್ಞೆಯನು, ಧರ್ಮೋಪದೇಶವನು. ಲಕ್ಷಿಸಲಿಲ್ಲ ನೀವಿತ್ತ ಎಚ್ಚರಿಕೆಯ ಮಾತುಗಳನು.


ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿ ಆದೆವು.


ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.


ಅವನು ಬೆನ್‍ಹಿನ್ನೋಮ್ ಎಂಬ ಕಣಿವೆಯಲ್ಲಿ ಧೂಪ ಹಾಕಿಸಿದ್ದಲ್ಲದೆ ಸರ್ವೇಶ್ವರಸ್ವಾಮಿ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದ್ದನು.


ನೀವು ಸರ್ವೇಶ್ವರನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗಾಗಿ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ!


ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ಇಸ್ರಯೇಲರು ತಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದದ್ದೂ ಅವರ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಅವರ ದಾಸ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣಗಳಾಗಿದ್ದವು.


ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.


ಇದಲ್ಲದೆ, ಅವರು ನಿನಗೆ, ‘ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಸಿದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ಮಿಲ್ಕೋಮ್ ಇವುಗಳನ್ನು ಆರಾಧಿಸುತ್ತಿದ್ದಾರೆ. ಅವರ ತಂದೆ ದಾವೀದನು ನನ್ನ ನಿಯಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆಹೋದದ್ದೂ ಇದಕ್ಕೆ ಕಾರಣ.


“ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪ ಮಾಡಿದವರೆಂದು ಒಪ್ಪಿಕೊಂಡು, ನನಗೆ ವಿರೋಧವಾಗಿ ನಡೆದದ್ದರಿಂದಲೇ


ನೀವು ವಾಸವಾಗಿದ್ದ ಈಜಿಪ್ಟಿನ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಕರೆದೊಯ್ಯುತ್ತಿರುವ ಕಾನಾನ್ ನಾಡಿನ ಆಚರಣೆಗಳನ್ನು ಕೂಡ ನೀವು ಅನುಸರಿಸಬಾರದು. ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಕೂಡದು.


ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಆದರೆ ಇಸ್ರಯೇಲರು ಅವರ ಮಾತನ್ನು ಕೇಳದೆ, ಮನಸ್ಸೆಯಿಂದ ಪ್ರೇರಿತರಾಗಿ, ತಮ್ಮ ಮುಂದೆಯೇ ಸರ್ವೇಶ್ವರನಿಂದ ಸಂಹೃತರಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ನಮ್ಮ ಮೇಲೆ ನೀವೆಷ್ಟೇ ಕೇಡನು ಬರಮಾಡಿದರೂ ನೀವು ನ್ಯಾಯವಂತರು, ಸತ್ಯಸ್ವರೂಪಿ, ನಾವೋ ದುಷ್ಟರು!


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಇತರ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮವನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು