Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:21 - ಕನ್ನಡ ಸತ್ಯವೇದವು C.L. Bible (BSI)

21 ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಯಾರ ಮನಸ್ಸು ತಮ್ಮ ಅಸಹ್ಯ ವಸ್ತುಗಳನ್ನೂ, ಅಸಹ್ಯ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದರೆ ಯಾರ ಚಿತ್ತವು ತಮ್ಮ ಅಸಹ್ಯವಸ್ತುಗಳನ್ನೂ ಹೇಯವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು. ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಮೇಲೆ ದೇವರು ಹೇಳಿದ್ದೇನೆಂದರೆ: “ಆದರೆ ಈಗ ಅವರ ಹೃದಯವು ಆ ಹೊಲಸು ವಿಗ್ರಹಗಳಿಗೆ ಸೇರಿದ್ದಾಗಿದೆ. ಅವರು ಮಾಡಿದ ದುಷ್ಟತನಕ್ಕೆ ನಾನು ಅವರನ್ನು ಶಿಕ್ಷಿಸಲೇಬೇಕಾಗಿದೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಯಾರ ಹೃದಯವು ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ಅನುಸರಿಸುತ್ತದೋ, ನಾನು ಅವರ ದುರ್ಮಾರ್ಗವನ್ನು ಅವರ ತಲೆಗೇ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:21
23 ತಿಳಿವುಗಳ ಹೋಲಿಕೆ  

ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”


ಅವರು ಅಲ್ಲಿಗೆ ಸೇರಿ ಎಲ್ಲ ಅಸಹ್ಯ ವಸ್ತುಗಳನ್ನೂ ಸಮಸ್ತ ಅನಿಷ್ಟ ವಿಗ್ರಹಗಳನ್ನೂ ತೆಗೆದುಹಾಕುವರು.


ನನ್ನ ಸ್ವಜನರು ನನ್ನನ್ನೆ ತೊರೆದುಬಿಟ್ಟು, ಅನ್ಯದೇವತೆಗಳಿಗೆ ಬಲಿಯರ್ಪಿಸಿ, ತಮ್ಮ ಕೈಯಿಂದ ನಿರ್ಮಿಸಿದ ಮೂರ್ತಿಗಳಿಗೆ ಆರಾಧನೆ ಮಾಡುತ್ತಿದ್ದಾರೆ; ಇಂಥ ಅಧರ್ಮಕ್ಕೆಲ್ಲ ನಾನು ಅವರಿಗೆ ವಿಧಿಸುವ ದಂಡನೆಗಳನ್ನು ತಿಳಿಸುವೆನು, ಕೇಳು :


ಇವರು ನಿಮ್ಮಲ್ಲಿ ಭಿನ್ನಭೇದವನ್ನು ಉಂಟುಮಾಡುವವರು, ಪ್ರಾಪಂಚಿಕ ವಿಷಯಾಸಕ್ತರು; ಪವಿತ್ರಾತ್ಮರಹಿತರಾಗಿ ಬಾಳುವವರು.


ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ.


ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ನೀವು ಬಲಿಯರ್ಪಿಸುತ್ತಾ, ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಂಡಿರಿ. ಹೀಗಿರುವಾಗ ಇಸ್ರಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೇ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಸರ್ವೇಶ್ವರನಾದ ದೇವರ ನುಡಿ.


ನೀನು ನಿನ್ನ ಯೌವನಕಾಲವನ್ನು ನೆನೆಸಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ, ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯಕಾರ್ಯವನ್ನೂ ಮಾಡಿರುವೆ. ಇದು ಸರ್ವೇಶ್ವರನಾದ ದೇವರ ನುಡಿ.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.


ಆಗ ನೀನು ಅವರಿಗೆ ಹೀಗೆಂದು ಹೇಳಬೇಕು : ಸರ್ವೇಶ್ವರನ ಈ ಮಾತಿಗೆ ಕಿವಿಗೊಡಿ : ‘ನಿಮ್ಮ ಪೂರ್ವಜರು ನನ್ನನ್ನು ತೊರೆದುಬಿಟ್ಟರು. ಅನ್ಯದೇವತೆಗಳನ್ನು ಹಿಂಬಾಲಿಸಿದರು. ಅವುಗಳಿಗೆ ಸೇವೆಸಲ್ಲಿಸಿ ಪೂಜಿಸಿದರು. ನನ್ನನ್ನು ಬಿಟ್ಟುದಲ್ಲದೆ ನನ್ನ ಧರ್ಮವಿಧಿಗಳನ್ನು ಮೀರಿದರು.


ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.


“ಈಗಲೇ ನಿನಗೆ ಪ್ರಳಯ ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ, ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.


“ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


“ನರಪುತ್ರನೇ, ಈ ಜನರು ವಿಗ್ರಹಗಳನ್ನು, ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೆ. ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು