Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:18 - ಕನ್ನಡ ಸತ್ಯವೇದವು C.L. Bible (BSI)

18 “ನರಪುತ್ರನೇ, ನೀನು ಅನ್ನವನ್ನು ಅಂಜಿಕೆಯಿಂದ ತಿಂದು, ನೀರನ್ನು ನಡುಕದಿಂದ ಕುಡಿದು, ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನರಪುತ್ರನೇ, ನೀನು ಅನ್ನವನ್ನು ನಡುಗುತ್ತಾ ತಿನ್ನು ಮತ್ತು ನೀರನ್ನು ಹೆದರಿಕೆಯಿಂದ ಕುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನರಪುತ್ರನೇ, ನೀನು ಅನ್ನವನ್ನು ನಡುಕದಿಂದ ತಿಂದು ನೀರನ್ನು ಅದರುಬೆದರಿನಿಂದ ಕುಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನರಪುತ್ರನೇ, ನೀನು ಭೀತಿಯಲ್ಲಿರುವವನಂತೆ ನಟನೆ ಮಾಡಬೇಕು. ನೀನು ಆಹಾರ ತೆಗೆದುಕೊಳ್ಳುವಾಗ ನಡುಗಬೇಕು. ನೀರು ಕುಡಿಯುವಾಗ ಭಯಪಡಬೇಕು ಮತ್ತು ಚಿಂತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಮನುಷ್ಯಪುತ್ರನೇ, ಆಹಾರವನ್ನು ನಡುಗುತ್ತಾ ಊಟಮಾಡು ಮತ್ತು ನೀರನ್ನು ನಡುಗುವಿಕೆಯಿಂದಲೂ, ಎಚ್ಚರಿಕೆಯಿಂದಲೂ ಕುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:18
14 ತಿಳಿವುಗಳ ಹೋಲಿಕೆ  

ಪ್ರಾಣಾಪಾಯದಿಂದ, ಕಾಡಿನ ಕಟುಕರ ಭಯದಿಂದ ನಾವು ಪಡೆಯುತ್ತಿದ್ದೇವೆ ದವಸ ಧಾನ್ಯ.


ರೋದನವನೆ ಅವರಿಗೆ ಅನ್ನವಾಗಿಸಿದೆ I ಹರಿಯುವ ಕಂಬನಿಯನೆ ಪಾನವಾಗಿಸಿದೆ II


ನಿಟ್ಟುಸಿರೇ ನನ್ನ ಮುಂದಿರುವ ಊಟ ಜಲಧಾರೆಯಂತಿದೆ ನನ್ನ ನರಳಾಟ.


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ. ಸ್ವಂತದ್ದು ಎಂದು ಹೇಳಿಕೊಳ್ಳಲು ಅಂಬೆಗಾಲಿಡುವಷ್ಟು ಸ್ಥಳಸಿಕ್ಕುವುದಿಲ್ಲ. ನೀವು ಗಡಗಡನೆ ನಡುಗುವ ಹೃದಯವುಳ್ಳವರಾಗಿ, ದಿಕ್ಕುತೋರದೆ ಕಂಗೆಟ್ಟವರಾಗಿ ಹಾಗು ಮನಗುಂದಿದವರಾಗಿ ಇರುವಂತೆ ಸರ್ವೇಶ್ವರ ಮಾಡುವರು.


ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;


“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.


ನೀನೂ ಕುಡಿದು, ಕುಡಿದು ಪೂರಾ ಅಮಲೇರಿ ದುಃಖಭರಿತಳಾಗುವೆ. ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವೆ.


ಇದಲ್ಲದೆ ಸರ್ವೇಶ್ವರನ ವಾಣಿ ನನಗೆ ಇಂತೆಂದಿತು:


ಆ ದರ್ಶನವನ್ನು ಕಂಡವನು ದಾನಿಯೇಲನಾದ ನಾನೊಬ್ಬನೇ. ನನ್ನೊಂದಿಗೆ ಇದ್ದವರು ಅದನ್ನು ಕಾಣಲಿಲ್ಲ. ಅವರು ಭಯಭ್ರಾಂತರಾಗಿ ಓಡಿಹೋಗಿ ಅವಿತುಕೊಂಡರು.


ನಿನ್ನ ಆಹಾರದ ತೂಕ ದಿನವೊಂದಕ್ಕೆ 230 ಗ್ರಾಂ ಇರಲಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು