Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 12:25 - ಕನ್ನಡ ಸತ್ಯವೇದವು C.L. Bible (BSI)

25 ನಾನೇ ಸರ್ವೇಶ್ವರ; ನಾನು ನುಡಿದೆ ತೀರುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು. ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು. ಇದು ಸರ್ವೇಶ್ವರನಾದ ದೇವರ ವಾಕ್ಯ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು; ಇದು ಕರ್ತನಾದ ಯೆಹೋವನ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಬೇಕಾಗದು. ಆ ಸಂಕಟಗಳು ಬೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾನೇ ಯೆಹೋವ ದೇವರು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವುದು; ಅದು ಇನ್ನು ನಿಧಾನವಾಗುವುದಿಲ್ಲ. ದ್ರೋಹಿಗಳಾದ ಮನೆತನದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡೆಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 12:25
20 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ತಮ್ಮ ಜನರಿಗೆ ಇಂತೆಂದರು: “ಜನಾಂಗಗಳ ಮಧ್ಯೆ ನಡೆಯುವುದನ್ನು ನೋಡಿರಿ. ನೋಡಿದರೆ ಬೆಕ್ಕಸಬೆರಗಾಗುವಿರಿ. ನಿಮ್ಮ ಕಾಲದಲ್ಲೇ ನಾನೊಂದು ಕಾರ್ಯವನ್ನು ಮಾಡುವೆನು. ಅದನ್ನು ಕುರಿತು ನೀವು ಕಿವಿಯಾರೆ ಕೇಳಿದರೂ ನೀವು ನಂಬುವುದಿಲ್ಲ.


ಆದಕಾರಣ ನೀನು ಅವರಿಗೆ ಹೀಗೆ ಹೇಳು: ಸರ್ವೇಶ್ವರನಾದ ದೇವರು ಹೇಳುವುದನ್ನು ಗಮನಿಸಿ: ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ಸಾವಕಾಶವಾಗದು; ನಾನಾಡುವ ಮಾತು ನೆರವೇರುವುದು ಖಂಡಿತ; ಇದು ಸರ್ವೇಶ್ವರನಾದ ದೇವರ ನುಡಿ.”


ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.


ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.”


ಏಕೆಂದರೆ ಇಸ್ರಯೇಲಿನ ದೇವರೂ ಸರ್ವಶಕ್ತ ಸರ್ವೇಶ್ವರನೂ ಆದ ನಾನು ಹೇಳುತ್ತೇನೆ, ಕೇಳು : ನಿಮ್ಮ ಕಾಲದಲ್ಲೆ, ನಿಮ್ಮ ಕಣ್ಣೆದುರಿಗೆ, ಸಂತೋಷ ಸಂಭ್ರಮದ ಧ್ವನಿಯನ್ನು ನಿಲ್ಲಿಸಿಬಿಡುವೆನು. ವಧೂವರರ ಸದ್ದೂ ಇಲ್ಲವಾಗುವುದು.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ಶುಭಸಂದೇಶಕ್ಕೆ ಸಾಕ್ಷಿಕೊಡಲು ಇದು ನಿಮಗೆ ಸದವಕಾಶವಾಗಿರುತ್ತದೆ.


ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.


ಮತ್ತು ಸರ್ವೇಶ್ವರನ ವಾಣಿ ನನಗೆ ಹೀಗೆಂದಿತು:


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ಇದಲ್ಲದೆ ಸರ್ವೇಶ್ವರ ಸ್ವಾಮಿ, “ಎಲೈ ಯೆರೆಮೀಯನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ಅದಕ್ಕೆ ನಾನು, ಚಚ್ಚರ ಮರದ ರೆಂಬೆಯನ್ನು ನೋಡುತ್ತಿದ್ದೇನೆ,” ಎಂದೆ.


ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು