Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:12 - ಕನ್ನಡ ಸತ್ಯವೇದವು C.L. Bible (BSI)

12 ಇಗೋ, ಗೋಡೆ ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಗೋ, ಗೋಡೆಯು ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ, ಗೋಡೆಯು ಬಿದ್ದ ಮೇಲೆ ನೀವು ಬಳಿದ ಸುಣ್ಣ ಎಲ್ಲಿ ಎಂದು ನಿಮ್ಮನ್ನು ಕೇಳುವರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಗೋಡೆಯು ಬಿದ್ದಾಗ ಜನರು ಪ್ರವಾದಿಗಳಾದ ನಿಮ್ಮನ್ನು, ‘ನೀವು ಗೋಡೆಗೆ ಹಾಕಿದ ಗಾರೆ ಏನಾಯಿತು?’” ಎಂದು ಪ್ರಶ್ನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಗೋಡೆ ಬಿದ್ದುಹೋದ ಮೇಲೆ, ನೀವು ಹಚ್ಚಿದ ಸುಣ್ಣ ಎಲ್ಲಿ?” ಎಂದು ನಿಮಗೆ ಕೇಳುವರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:12
11 ತಿಳಿವುಗಳ ಹೋಲಿಕೆ  

‘ಬಾಬಿಲೋನಿನ ಅರಸನು ನಿಮಗೂ ಈ ನಾಡಿಗೂ ವಿರುದ್ಧವಾಗಿ ಆಕ್ರಮಣ ನಡೆಸನು’ ಎಂದು ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!


ಎಲೀಷನು ಇಸ್ರಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು,” ಎಂದು ಹೇಳಿದನು. ಅದಕ್ಕೆ ಇಸ್ರಯೇಲರ ಅರಸನು, “ಹಾಗೆನ್ನಬೇಡಿ; ಸರ್ವೇಶ್ವರ ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಇಲ್ಲಿಗೆ ಬರಮಾಡಿದ್ದಾರೆ ಅಲ್ಲವೇ?’ ಎಂದನು.


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯಮಾಡಲಿ,” ಎಂದರು.


ಆಗ ಜೆಬುಲನು ಅವನಿಗೆ, “ಈಗ ನಿನ್ನ ಮಾತೆಲ್ಲಿ? ಅಬೀಮೆಲೆಕನು ಎಷ್ಟರವನು? ನಾವು ಅವನಿಗೆ ಏಕೆ ಸೇವೆಮಾಡಬೇಕು ಎಂದು ಕೊಚ್ಚಿಕೊಂಡಿಯಲ್ಲವೆ? ಅವರು ನೀನು ತಿರಸ್ಕರಿಸಿದ ಜನರಲ್ಲವೇ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ,” ಎಂದು ಹೇಳಿದನು.


ಆಗ ನುಡಿವನು ಸ್ವಾಮಿ ಸರ್ವೇಶ್ವರ ಇಂತೆಂದು; ಎಲ್ಲಿಗೆ ಹೋದರು ಅವರು ಪೂಜಿಸುತ್ತಿದ್ದ ದೇವರುಗಳು? ಎಲ್ಲಿರುವನು ಅವರು ಆಶ್ರಯಿಸಿಕೊಂಡಿದ್ದ ದುರ್ಗವಾದವನು.


ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೆ ಆಕೆ ಆಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿ ಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು.


ಆದಕಾರಣ, ನೀನು ಸುಣ್ಣ ಬಳಿಯುವವರಿಗೆ ಹೀಗೆ ನುಡಿ: ‘ವಿಪರೀತ ಮಳೆಯಾಗಿ ಗೋಡೆ ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವುವು; ಬಿರುಗಾಳಿ ಗೋಡೆಯನ್ನು ಕೆಡವಿಹಾಕುವುದು;


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು