Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:23 - ಕನ್ನಡ ಸತ್ಯವೇದವು C.L. Bible (BSI)

23 ಆದಕಾರಣ ನೀವು ಮಿಥ್ಯದರ್ಶನವನ್ನು ಹೊಂದಿ, ಸುಳ್ಳುಭವಿಷ್ಯ ಹೇಳುವ ಕೆಲಸ ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈವಶದಿಂದ ಬಿಡಿಸುವೆನು; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ವಿುಥ್ಯಾದರ್ಶನವನ್ನು ಹೊಂದಿ ಕಣಿಹೇಳುವ ಕೆಲಸವು ಇನ್ನು ನಡಿಯುವದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ನೀವು ಪ್ರಯೋಜನವಿಲ್ಲದ ದರ್ಶನವನ್ನು ಇನ್ನು ಮೇಲೆ ನೋಡುವುದಿಲ್ಲ. ನೀವು ನಿಮ್ಮ ಮಂತ್ರತಂತ್ರಗಳನ್ನು ಇನ್ನು ಮಾಡುವುದಿಲ್ಲ. ನನ್ನ ಶಕ್ತಿಯಿಂದ ನಾನು ನನ್ನ ಜನರನ್ನು ಕಾಪಾಡುತ್ತೇನೆ. ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ನೀವು ಇನ್ನು ಮೇಲೆ ಸುಳ್ಳು ದರ್ಶನಗಳನ್ನು ಕಾಣುವುದಿಲ್ಲ ಮತ್ತು ಸುಳ್ಳು ದೈವೋಕ್ತಿಗಳನ್ನು ಅಭ್ಯಾಸಿಸುವುದಿಲ್ಲ. ಏಕೆಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ಬಿಡಿಸುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:23
20 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.”


“ಇನ್ನು ಮೇಲೆ ಇಸ್ರಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು; ಮೋಸದ ಕಣಿ ಇರದು.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ಯಾವನಾದರೂ ಪ್ರವಾದನೆ ಮಾಡಲು ಯತ್ನಿಸಿದರೆ, ಅವನ ತಾಯಿತಂದೆಗಳೇ, “ಇವನು ಸರ್ವೇಶ್ವರಸ್ವಾಮಿಯ ಹೆಸರೆತ್ತಿ ಸುಳ್ಳಾಡುವುದರಿಂದ ಅವನು ಬದುಕಬಾರದು,” ಎಂದು ಹೇಳುವರು. ಅಷ್ಟೇ ಅಲ್ಲ, ಅವನು ಮಾಡಿದ ಪ್ರವಾದನೆಯ ನಿಮಿತ್ತ ಅವರೇ ಅವನನ್ನು ತಿವಿದು ಕೊಂದುಹಾಕುವರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.


ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಜಂಬದ ಹೇಳಿಕೆಗಳನ್ನೂ ದೇವದೂಷಣೆಯ ಮಾತುಗಳನ್ನೂ ಆಡುವುದಕ್ಕೆ ಆ ಮೃಗಕ್ಕೆ ಒಂದು ಬಾಯನ್ನು ಕೊಡಲಾಗಿತ್ತು. ನಲವತ್ತ ಎರಡು ತಿಂಗಳುಗಳವರೆಗೆ ತನ್ನ ಕಾರ್ಯ ಸಾಧಿಸಿಕೊಳ್ಳುವ ಅಧಿಕಾರವನ್ನೂ ಅದಕ್ಕೆ ನೀಡಲಾಗಿತ್ತು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ದುರ್ಮತಿಗಳೂ ವಿಶ್ವಾಸಭ್ರಷ್ಟರೂ ಆಗಿದ್ದಾರೆ. ಆದರೆ ಅವರ ಮೂರ್ಖತನ ದೀರ್ಘಕಾಲ ಬಾಳದು. ಯನ್ನ ಮತ್ತು ಯಂಬ್ರಳ ದೋಷದಂತೆ ಅದು ಸರ್ವರಿಗೂ ಬಟ್ಟಬಯಲಾಗುತ್ತದೆ.


ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಾಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ.


ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು.


ಅವನಿಗೆ ವಿಮುಖನಾಗಿ ಅವನ ದುರ್ಗತಿಯು ಎಚ್ಚರಿಕೆಗೆ ಗುರುತಾಗಿಯೂ ಕಟ್ಟುಗಾದೆಗಳಿಗೆ ವಸ್ತುವಾಗಿಯೂ ಆಗುವಂತೆ ಮಾಡುವೆನು; ಅವನನ್ನು ನನ್ನ ಜನರಿಂದ ಹೊರಹಾಕುವೆನು; ಹೀಗೆ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು