Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುವವರಿಗೆ ಆದ ದರ್ಶನ ವಿುಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವದೆಂದು ಸುಮ್ಮ ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “‘ಅವರನ್ನು ಯೆಹೋವನು ಕಳುಹಿಸಿಲ್ಲದಿದ್ದರೂ ಅವರು, “ಯೆಹೋವನು ಇದನ್ನು ಹೇಳಿದ್ದಾನೆ” ಎನ್ನುತ್ತಾರೆ. ಅವರು ಮಾಟಮಂತ್ರ ಮಾಡಿ ಇಂತಿಂಥದ್ದು ಸಂಭವಿಸುವುದು ಎಂದು ಸುಳ್ಳು ಹೇಳುತ್ತಾರೆ. ದೇವರು ನಮ್ಮನ್ನು ಕಳುಹಿಸಿದ್ದು ಎಂದು ಸುಳ್ಳು ಹೇಳುವರು. ಅವರು ತಮ್ಮ ಸುಳ್ಳು ನಿಜವಾಗುತ್ತಿರುವದನ್ನು ನೋಡಲು ಕಾಯುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು, ಯೆಹೋವ ದೇವರು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:6
28 ತಿಳಿವುಗಳ ಹೋಲಿಕೆ  

ಅಲ್ಲಿನ ಪ್ರವಾದಿಗಳು ಇವರಿಗಾಗಿ ಮಿಥ್ಯ ದರ್ಶನವನ್ನು ಕಂಡು, ಸುಳ್ಳು ಕಣಿಯನ್ನು ಹೇಳಿ, ಸರ್ವೇಶ್ವರ ಮಾತಾಡದಿದ್ದರೂ ‘ಸರ್ವೇಶ್ವರ ದೇವರು ಇಂತೆನ್ನುತ್ತಾರೆ’ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ.


ಇಸ್ರಯೇಲರ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಮಗೆ ಹೇಳುತ್ತೇನೆ: ನಿಮ್ಮ ಮಧ್ಯೆ ಇರುವ ಪ್ರವಾದಿಗಳಿಗೂ ಶಕುನದವರಿಗೂ ಕಿವಿಗೊಟ್ಟು ಮೋಸಹೋಗದಿರಿ. ನಿಮಗಾಗಿ ಕನಸುಕಂಡು ಹೇಳುವವರನ್ನು ನಂಬಬೇಡಿ.


ಆಗ ಪ್ರವಾದಿ ಯೆರೆಮೀಯನು ಪ್ರವಾದಿ ಹನನ್ಯನಿಗೆ, “ಹನನ್ಯನೇ ಕೇಳು, ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ. ಆದರೂ ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತಿರುವೆ.


ಅಮ್ಮೋನೇ, ನಿನ್ನ ಜೋಯಿಸರು ಮಿಥ್ಯೆಯನ್ನು ಕಲ್ಪಿಸಿಕೊಂಡು ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಸಮೀಪಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು; ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಬೀಳುವೆ.


‘ಬಾಬಿಲೋನಿನ ಅರಸನು ನಿಮಗೂ ಈ ನಾಡಿಗೂ ವಿರುದ್ಧವಾಗಿ ಆಕ್ರಮಣ ನಡೆಸನು’ ಎಂದು ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಗೃಹದೇವತೆಗಳು ನುಡಿಯುವುದು ಜೊಳ್ಳು; ಶಕುನ ಹೇಳುವವರ ಮಾತು ಸುಳ್ಳು. ಸ್ವಪ್ನಕಾರರ ಕನಸುಗಳು ಕಲ್ಪಿತ, ಅವರು ಹೇಳುವ ಸಮಾಧಾನ ವ್ಯರ್ಥ, ಈ ಕಾರಣ ಜನರು ಕುರಿಗಳಂತೆ ಚದರಿದ್ದಾರೆ; ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಆದಕಾರಣ, ಅಸತ್ಯವನ್ನು ನಂಬುವಂಥ ಗಾಢಭ್ರಮೆಗೆ ದೇವರು ಅವರನ್ನು ಒಳಪಡಿಸುವರು.


ಅನೇಕರು ನನ್ನ ಹೆಸರನ್ನು ಇಟ್ಟುಕೊಂಡು ಬಂದು, ‘ನಾನೇ ಕ್ರಿಸ್ತ’, ‘ನಾನೇ ಕ್ರಿಸ್ತ’ ಎನ್ನುತ್ತಾ ಎಷ್ಟೋ ಜನರನ್ನು ತಪ್ಪುದಾರಿಗೆ ಎಳೆಯುವರು.


ಆದರೆ ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸೆಯಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವರು ತನ್ನ ಕೈಗೆ ಸಿಕ್ಕಿಬೀಳಲೆಂದು ಅವರ ಅಧರ್ಮವನ್ನು ಅವನು ಬೆಳಕಿಗೆ ತರುವನು.


ನಾನು ಮಾತಾಡದೆ ಇದ್ದರೂ ‘ಸರ್ವೇಶ್ವರ ಇಂತೆನ್ನುತ್ತಾರೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಭವಿಷ್ಯ ಸುಳ್ಳು.’


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


‘ಸೆರೆಯಲ್ಲಿ ಇರುವ ಎಲ್ಲರಿಗೆ ಹೀಗೆಂದು ಹೇಳಿಕಳಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಸರ್ವೇಶ್ವರ ಇಂತೆನ್ನುತ್ತಾರೆ: ನಾನು ಕಳಿಸದೆ ಇದ್ದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳನ್ನು ನಂಬುವಂತೆ ಮಾಡಿದ್ದಾನೆ.


“ ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ ಇದು: ‘ಬಾಬಿಲೋನಿಯದ ಅರಸನು ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.


ಪೆದ್ದನು ಕಿವಿಗೆ ಬಿದ್ದುದೆಲ್ಲವನ್ನು ನಂಬಿಬಿಡುವನು; ಜಾಣನು ವಿವೇಚನೆ ಮಾಡಿ ಹೆಜ್ಜೆ ಇಡುವನು.


ಅರಸನ ಶವವನ್ನು ಸಮಾರಿಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.


ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕರಗಿಸಬೇಕು,’ ಎಂದು ಆಜ್ಞಾಪಿಸಿದನು.


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗಿ; ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು.


ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬಾರದೋ?” ಎಂದು ಕೇಳಿದನು. ಅವನು, “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಪಟ್ಟಣವನ್ನು ಅರಸರ ಕೈಗೆ ಒಪ್ಪಿಸುವರು,” ಎಂದು ಹೇಳೀದನು.


ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು