Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು ನನ್ನ ಮುಂದೆ ಕೂತುಕೊಂಡಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಲು ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:1
13 ತಿಳಿವುಗಳ ಹೋಲಿಕೆ  

ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.


ಏಳನೆಯ ವರ್ಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಸರ್ವೇಶ್ವರನನ್ನು ಪ್ರಶ್ನಿಸುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳ ಕೇಳಿಸುತ್ತಿದೆಯಲ್ಲವೆ?” ಎಂದು ಹೇಳಿದನು.


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: “ಜನರ ಅಧಿಕಾರಿಗಳೇ, ಪ್ರಮುಖರೇ,


ಮಾರನೆಯ ದಿನ ಯೆಹೂದ್ಯ ಅಧಿಕಾರಿಗಳೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಜೆರುಸಲೇಮಿನಲ್ಲಿ ಸಭೆ ಸೇರಿದರು.


ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.


ನನ್ನ ಮುಂದೆ ಕುಳಿತುಕೊಂಡು ಇರುವಾಗ ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:


ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.


ಅದಕ್ಕೆ ಪಹರೆಯವನು, “ಹಗಲು ಬರುತ್ತಿದೆ ಮತ್ತೆ ರಾತ್ರಿಯೂ ಬರುತ್ತದೆ. ಬೇಕಾದರೆ ಆಮೇಲೆ ಬಂದು ವಿಚಾರಿಸಿರಿ,” ಎಂದನು.


“ನರಪುತ್ರನೇ, ಇಸ್ರಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು