Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:11 - ಕನ್ನಡ ಸತ್ಯವೇದವು C.L. Bible (BSI)

11 ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅನಂತರ ನಿನಗೆ ಕೆಲವು ಆಭರಣಗಳನ್ನು ಕೊಟ್ಟೆನು. ನಿನ್ನ ತೋಳುಗಳಿಗೆ ತೋಳುಕಟ್ಟುಗಳನ್ನು, ಕುತ್ತಿಗೆಗೆ ಹಾರವನ್ನು ತೊಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಭರಣಗಳಿಂದ ನಿನ್ನನ್ನು ಅಲಂಕರಿಸಿದೆನು: ನಾನು ನಿನ್ನ ಕೈಗಳಿಗೆ ಕಡಗಗಳನ್ನು ನಿನ್ನ ಕೊರಳಿಗೆ ಸರವನ್ನು ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:11
31 ತಿಳಿವುಗಳ ಹೋಲಿಕೆ  

ಒಂಟೆಗಳು ಕುಡಿದಾದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ತೊಡಿಸಿದನು.


ಜುಮಕಿ, ಬಳೆ, ಕುಲಾವಿ, ಶಿರವಸ್ತ್ರ,


ತನ್ನ ಬೆರಳಿನಿಂದ ಮುದ್ರಿಕೆಯನ್ನು ತೆಗೆದು ಜೋಸೆಫನ ಬೆರಳಿಗೆ ಇಟ್ಟನು. ಅವನಿಗೆ ಮೌಲ್ಯವಾದ ವಸ್ತ್ರಗಳನ್ನು ಹೊದಿಸಿದನು. ಕೊರಳಿಗೆ ಚಿನ್ನದ ಸರವನ್ನು ಹಾಕಿಸಿದನು.


ನೀನು ಯಾರ ಮಗಳೆಂದು ಕೇಳಿದ್ದಕ್ಕೆ, 'ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು. ಅದನ್ನು ಕೇಳಿ ನಾನು ಆಕೆಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ತೊಡಿಸಿ,


ಅವು ನಿನ್ನ ತಲೆಗೆ ಸುಂದರ ಕಿರೀಟ, ನಿನ್ನ ಕೊರಳಿಗೆ ಕಂಠಾಭರಣ.


ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡುಕರು ನಾಡಾಡಿಗರೊಂದಿಗೆ ಸೇರಿ ಅಸ್ಸೀರಿಯರಿಬ್ಬರ ಕೈಗೆ ಕಡಗವನ್ನು ತೊಡಿಸಿ, ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.


ಸರ್ವೇಶ್ವರ ಸ್ವಾಮಿ ನಮ್ಮ ಪ್ರಾಣಗಳನ್ನು ಕಾಪಾಡಿದ್ದಾರೆ. ಅದಕ್ಕೆ ಈಡಾಗಿ ಅವರಿಗೆ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು, ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ, ಮುಂತಾದುವುಗಳನ್ನು ತಂದಿದ್ದೇವೆ,” ಎಂದರು.


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ತಕ್ಷಣವೇ ಬೇಲ್ಶಚ್ಚರನ ಆಜ್ಞೆಯ ಮೇರೆಗೆ ದಾನಿಯೇಲನಿಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿದರು. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿದರು. ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನಾದನು ಎಂದು ಪ್ರಕಟಿಸಿದರು.


ನೀನು ಗೂಡಾರ್ಥಗಳನ್ನು ವಿವರಿಸಬಲ್ಲವನೂ ಗುಂಜುಗಂಟುಗಳನ್ನು ಬಿಚ್ಚಬಲ್ಲವನೂ ಎಂಬ ಸಮಾಚಾರ ನನಗೆ ಮುಟ್ಟಿದೆ. ಈ ಬರಹವನ್ನು ಓದಿ, ಇದರ ಅಭಿಪ್ರಾಯವನ್ನು ನನಗೆ ತಿಳಿಸಿದೆಯಾದರೆ ನಿನಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.


“ಇಷ್ಟರಲ್ಲಿ ದೂತನನ್ನು ಕಳುಹಿಸಿ ಪುರುಷರನ್ನು ದೂರದಿಂದ ಕರೆಯಿಸಿಕೊಂಡರು. ಇಗೋ, ಅವರೂ ಬಂದರು. ಎಲೌ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ, ಕಣ್ಣಿಗೆ ಕಾಡಿಗೆ ಹಚ್ಚಿ,


ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.


ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.


ಮುದ್ರೆ ಉಂಗುರ, ಮೂಗುತಿ,


ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಹೃದಯವನ್ನು ನೀನು ಅಪಹರಿಸಿರುವೆ ಒಂದೇ ಕಿರುನೋಟದಿಂದ, ನನ್ನ ಹೃದಯವನ್ನು ವಶಪಡಿಸಿಕೊಂಡಿರುವೆ ನಿನ್ನ ಕಂಠಹಾರದ ಒಂದೇ ರತ್ನದಿಂದ.


ಎಷ್ಟು ಅಂದವಾಗಿವೆ ನಿನ್ನ ಕೆನ್ನೆಗಳು ಕಿವಿಯೋಲೆಗಳಿಂದ! ನಿನ್ನ ಕೊರಳು ಕಂಠಹಾರಗಳಿಂದ!


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ಅಂದದ ಪುಷ್ಪಮಾಲೆಯನ್ನು ಹಾಕುವಳು ನಿನ್ನ ಕೊರಳಿಗೆ, ಸುಂದರ ಕಿರೀಟವನ್ನು ಮುಡಿಸುವಳು ನಿನ್ನ ತಲೆಗೆ.”


ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.


ಅರಸನು, ಎಲ್ಲಾ ಸ್ತ್ರೀಯರಿಗಿಂತಲೂ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಎಲ್ಲಾ ಕನ್ಯೆಯರ ಪೈಕಿ ಅರಸನ ವಿಶೇಷ ದಯೆಗೂ ಪ್ರೀತಿಗೂ ಪಾತ್ರಳಾದಳು. ಈ ಕಾರಣ, ಅರಸನು ಆಕೆಯ ತಲೆಯ ಮೇಲೆ ರಾಜಮುಕುಟವನ್ನಿಟ್ಟು ವಷ್ಟಿರಾಣಿಗೆ ಬದಲಾಗಿ ಆಕೆಯನ್ನು ತನ್ನ ಪಟ್ಟದರಸಿಯನ್ನಾಗಿ ಆರಿಸಿಕೊಂಡನು.


ಆದರೆ ನಿಮ್ಮಲ್ಲಿ ನನ್ನದೊಂದು ಬಿನ್ನಹಃ ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಮುರುವುಗಳನ್ನು ನನಗೆ ಕೊಡಲಿ,” ಎಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದುದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.


ಅವನ ತಲೆಗೆ ಸಿರಿಪೇಟವನ್ನು ತೊಡಿಸಿ, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದು ಅವನಿಗೆ ಪವಿತ್ರ ಕಿರೀಟದಂತಿತ್ತು.


ಹೆಂಗಸರು ಹಾಗು ಗಂಡಸರು ಧಾರಾಳ ಮನಸ್ಸಿನಿಂದ ಸರ್ವೇಶ್ವರನಿಗೆ ಚಿನ್ನದ ಕಾಣಿಕೆಗಳನ್ನು, ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.


ಅದಕ್ಕೆ ಆರೋನನು, “ನಿಮ್ಮ ಹೆಂಡತಿಯರು, ಗಂಡುಮಕ್ಕಳು ಹಾಗು ಹೆಣ್ಣುಮಕ್ಕಳು ಹಾಕಿಕೊಂಡಿರುವ ಚಿನ್ನದ ಕಿವಿಯೋಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ,” ಎಂದನು.


ಅಂತೆಯೆ ಅವರು ತಮ್ಮಲ್ಲಿದ್ದ ಎಲ್ಲ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಕೋಬನಿಗೆ ಒಪ್ಪಿಸಿಬಿಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರ ಇದ್ದ ಒಂದು ಓಕ್ ಮರದ ಬುಡದಡಿಯಲ್ಲಿ ಹೂಳಿಬಿಟ್ಟನು.


ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು.


ನಾನು ನನ್ನ ಬೆಳ್ಳಿಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ಅಂದಚೆಂದವಾದ ಆಭರಣಗಳನ್ನು ತೆಗೆದು, ಅವುಗಳಿಂದ ಪುರುಷಮೂರ್ತಿಗಳನ್ನು ರೂಪಿಸಿಕೊಂಡು, ಅವುಗಳೊಡನೆ ಹಾದರ ಮಾಡಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು