Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:3 - ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ದೇವರು ಜೆರುಸಲೇಮೆಂಬಾಕೆಗೆ ಈ ಮಾತನ್ನು ಹೇಳಿ ಕಳುಹಿಸಿದ್ದಾರೆ: “ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, ‘ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಯೆರೂಸಲೇಮೆಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ - ನೀನು ಹುಟ್ಟಿದ್ದು ಕಾನಾನ್ ದೇಶ, ಅದೇ ನಿನ್ನ ಜನ್ಮಭೂವಿು, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತೀಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಏನು ಹೇಳಬೇಕೆಂದರೆ, ‘ಜೆರುಸಲೇಮಿಗೆ ನನ್ನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಿನ್ನ ಇತಿಹಾಸವನ್ನು ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನ್ನ ತಂದೆಯು ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾರೆ: ನಿಮ್ಮ ಪೂರ್ವಜರು ಮತ್ತು ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ; ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:3
24 ತಿಳಿವುಗಳ ಹೋಲಿಕೆ  

ಗಂಡನನ್ನೂ ಮಕ್ಕಳನ್ನೂ ಅಸಹ್ಯವಾಗಿ ಕಂಡ ನಿನ್ನ ತಾಯಿಗೆ ನೀನು ತಕ್ಕ ಮಗಳು ; ಗಂಡನನ್ನೂ ಮಕ್ಕಳನ್ನೂ ಬೇಸರ ಪಡಿಸಿದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ, ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲರನ್ನೂ ವಿನಾಶ ಶಾಪಗ್ರಸ್ತರನ್ನಾಗಿ ಮಾಡಿಬಿಡಬೇಕು.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಸರ್ವೇಶ್ವರಾ, ಅಬ್ರಾಮನನು ನೀವು ಆರಿಸಿಕೊಂಡಿರಿ ಬಾಬಿಲೋನಿನ ‘ಊರ್’ ನಗರದಿಂದ ಆತನನು ಬರಮಾಡಿದಿರಿ ದೇವರಾದ ನೀವೇ ಆತನಿಗೆ ‘ಅಬ್ರಹಾಮ’ ಎಂದು ಹೆಸರಿಟ್ಟಿರಿ.


ಯೊವಾನ್ನನ ಬಳಿಗೆ ಸ್ನಾನದೀಕ್ಷೆ ಪಡೆಯಲು ಜನರು ಗುಂಪುಗುಂಪಾಗಿ ಬರುತ್ತಿದ್ದರು. ಆತನು ಅವರಿಗೆ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆಕೊಟ್ಟವರಾರು?


ಕತ್ತಿಯನ್ನು ಒರೆಗೆ ಸೇರಿಸು. ನೀನು ಹುಟ್ಟಿದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ, ನಿನಗೆ ನ್ಯಾಯತೀರಿಸುವೆನು.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ಇದಾದನಂತರ ಮುಖ್ಯಸ್ಥರು ನನ್ನ ಬಳಿಗೆ ಬಂದು, “ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಎಂಬ ಅನ್ಯದೇಶಗಳವರ ಪದ್ಧತಿಯನ್ನು ತೊರೆಯದೆ, ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ,


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


ಅಬ್ರಾಮನು ಮತ್ತು ನಾಹೋರನು ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆ ಹಾರಾನನ ಮಗಳು; ಹಾರಾನನು ಮಿಲ್ಕಳಿಗು ಹಾಗೂ ಇಸ್ಕಳಿಗು ತಂದೆ.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ಆದುದರಿಂದ ತೀರ್ಪಿನ ದಿನ ಸೊದೋಮಿನ ಗತಿ ನಿನಗಿಂತ ಸಹನೀಯವಾಗಿರುವುದು ಎಂಬುದು ನಿನಗೆ ತಿಳಿದಿರಲಿ,” ಎಂದರು.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


“ಯೆಹೂದ್ಯರ ಅರಸನಾದ ಮನಸ್ಸೆಯು, ಹಿಂದೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡೆಸಿದ್ದಾನೆ. ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದ್ದಾನೆ;


“ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.


ಅನಂತರ ನಾಹೋರನು ಗಂಡುಹೆಣ್ಣು ಮಕ್ಕಳನ್ನು ಪಡೆದು 190 ವರ್ಷ ಬದುಕಿದ್ದನು.


ಗೆಷೂರ್ಯರ ನಾಡು, ದಕ್ಷಿಣದಲ್ಲಿದ್ದ ಅವ್ವೀಯರ ನಾಡು; ಸಿದೋನ್ಯರಿಗೆ ಸೇರಿದ ಮೆಯರಾದಿಂದ ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ನಾಡು;


ಪಾಪಿಷ್ಟನಾಗಿದ್ದನು ನಿನ್ನ ಮೂಲಪಿತೃವು ನನಗೆ ದ್ರೋಹಿಗಳಾಗಿದ್ದರು ನಿನ್ನ ಪರವಾದಿಗಳು ನನ್ನ ಪವಿತ್ರಾಲಯವನ್ನು ಹೊಲೆಮಾಡಿದರು ನಿನ್ನ ಅಧಿಪತಿಗಳು.


“ನರಪುತ್ರನೇ, ನೀನು ಜೆರುಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ -


ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಂದು ಯಾರೂ ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ. ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವು ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲಿ ಸುತ್ತಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು