Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:35 - ಕನ್ನಡ ಸತ್ಯವೇದವು C.L. Bible (BSI)

35 ಹೀಗಿರಲು ಎಲೌ ಜಾರಿಣಿಯೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಹೀಗಿರಲು ವ್ಯಭಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಹೀಗಿರಲು, ಸೂಳೆಯೇ, ಯೆಹೋವನ ಈ ವಾಕ್ಯವನ್ನು ಕೇಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಸೂಳೆಯೇ, ಯೆಹೋವನ ಸಂದೇಶವನ್ನು ಕೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ ‘ಆದಕಾರಣ ವ್ಯಭಿಚಾರಿಣಿಯೇ, ನೀನು ಯೆಹೋವ ದೇವರ ವಾಕ್ಯವನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:35
19 ತಿಳಿವುಗಳ ಹೋಲಿಕೆ  

ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


“ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ. ನಿನಗೆ ಐದು ಜನ ಗಂಡಂದಿರು ಇದ್ದರು. ಈಗ ನಿನ್ನೊಡನೆ ಇರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು ಯೇಸು ಸ್ವಾಮಿ.


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ಇದೆಲ್ಲ ಆಗುವುದು ಅಮಿತ ಹಾದರದ ನಿಮಿತ್ತ ರಾಷ್ಟ್ರಗಳನು ತನ್ನ ಬೆಡಗು ಬಿನ್ನಾಣಗಳಿಂದ ಜಾರತನಕ್ಕೂ ಗುಲಾಮತನಕ್ಕೂ ಆಕೆ ತಂದುದರಿಂದ.


“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?


ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.


ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.


“ಕುರುಬರೇ, ಸರ್ವೇಶ್ವರನ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ -


ಆ ವನಕ್ಕೆ ಹೀಗೆ ಪ್ರವಾದಿಸು: ‘ಸರ್ವೇಶ್ವರನ ಮಾತನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು. ಅದು ನಿನ್ನಲ್ಲಿನ ಎಲ್ಲಾ ಹಸಿರುಮರಗಳನ್ನೂ ಒಣಮರಗಳನ್ನೂ ಕಬಳಿಸಿಬಿಡುವುದು; ಧಗಧಗಿಸುವ ಜ್ವಾಲೆ ಆರದೆ, ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕುಂದಿಸುವುದು.


“ನರಪುತ್ರನೇ, ಪ್ರವಾದನೆ ಮಾಡಿ ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತ ಹೀಗೆ ಹೇಳು: “ಸರ್ವೇಶ್ವರನ ವಾಕ್ಯವನ್ನು ಕೇಳಿರಿ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?


ಆದಕಾರಣ, ಜೆರುಸಲೇಮಿನ ಜನರನ್ನಾಳುವ ಧರ್ಮನಿಂದಕರೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳಿರಿ.


ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ನಿನ್ನ ಸೂಳೆತನಕ್ಕೂ ಇತರ ವೇಶ್ಯೆಯರ ಸೂಳೆತನಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರ ಹೇಳತೀರದು!”


“ಆಹಾ, ಮಿತಿಮೀರಿದ ನಿನ್ನ ಕಾಮಾತುರ! ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಮಿಂಡರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲ ಅಸಹ್ಯವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು