Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:4 - ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಂದು ಯಾರೂ ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ. ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವು ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲಿ ಸುತ್ತಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಲ್ಲಿ ತಾಯಿಯು ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲು ಸುತ್ತಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿವಸದಲ್ಲಿ ಯಾರೂ ನಿನ್ನ ಹೊಕ್ಕಳು ಕೊಯ್ದುಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲಿ ಎಷ್ಟು ಮಾತ್ರವೂ ಸುತ್ತಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜೆರುಸಲೇಮೇ, ನೀನು ಹುಟ್ಟಿದ ಆ ದಿವಸದಲ್ಲಿ ನಿನ್ನ ಹೊಕ್ಕಳ ನಾಳವನ್ನು ಕೊಯ್ಯಲು ಯಾರೂ ಇದ್ದಿಲ್ಲ. ನಿನ್ನ ಮೈಯನ್ನು ನೀರು ಹಾಕಿ ಯಾರೂ ತೊಳೆದು ಶುದ್ಧಮಾಡಿಲ್ಲ. ನಿನ್ನನ್ನು ಯಾರೂ ಉಪ್ಪಿನಿಂದ ಉಜ್ಜಿಲ್ಲ. ಯಾರೂ ನಿನಗೆ ಬಟ್ಟೆ ಸುತ್ತಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಹುಟ್ಟಿದ ಸ್ಥಳದ ವಿಷಯವು: ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸಲಾಗಲಿಲ್ಲ; ಶುದ್ಧವಾಗುವ ಹಾಗೆ ನೀರಿನಲ್ಲಿ ತೊಳೆಯಲಾಗಲಿಲ್ಲ; ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:4
18 ತಿಳಿವುಗಳ ಹೋಲಿಕೆ  

ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.


ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.


ಇಗೋ, ನಿಮಗೊಂದು ಸೂಚನೆ - ಆ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಗೋದಲಿಯೊಂದರಲ್ಲಿ ಮಲಗಿಸಿರುವುದನ್ನು ಕಾಣುವಿರಿ,” ಎಂದನು.


ಆಕೆ ಚೊಚ್ಚಲು ಮಗನಿಗೆ ಜನ್ಮವಿತ್ತು, ಇದ್ದ ಬಟ್ಟೆಯಲ್ಲೇ ಸುತ್ತಿ ಅದನ್ನು ಗೋದಲಿಯಲ್ಲಿ ಮಲಗಿಸಿದಳು. ಕಾರಣ - ಛತ್ರದಲ್ಲಿ ಅವರಿಗೆ ಸ್ಥಳ ಸಿಗಲಿಲ್ಲ.


‘ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದ ನಾಡಾಗಿದ್ದು, ಈಜಿಪ್ಟಿನಿಂದ ನಿನ್ನನ್ನು ಬಿಡುಗಡೆ ಮಾಡಿದವನು.


ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ.


ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ !


ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?


ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.


ಸರ್ವೇಶ್ವರ ದೇವರು ಜೆರುಸಲೇಮೆಂಬಾಕೆಗೆ ಈ ಮಾತನ್ನು ಹೇಳಿ ಕಳುಹಿಸಿದ್ದಾರೆ: “ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು