Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:52 - ಕನ್ನಡ ಸತ್ಯವೇದವು C.L. Bible (BSI)

52 ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪರವಾಗಿ ನಿಂತದ್ದರಿಂದ ನೀನು ನಾಚಿಕೆಪಡಬೇಕು; ಅವರಿಗಿಂತ ಅಧಿಕವಾಗಿ ನೀನು ಅಸಹ್ಯ ಪಾಪಗಳನ್ನು ಮಾಡಿರುವುದರಿಂದ ಅವರು ನಿನಗಿಂತ ಉತ್ತಮರಾಗಿದ್ದಾರೆ. ಹೌದು, ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿದ್ದಕ್ಕಾಗಿ ಲಜ್ಜೆಪಡು, ನಾಚಿಕೆಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯ ಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿದ್ದೀಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಆದ್ದರಿಂದ ನಿನ್ನ ಅವಮಾನವನ್ನು ನೀನು ಸಹಿಸಿಕೊಳ್ಳಬೇಕು. ನಿನಗಿಂತ ನಿನ್ನ ಸಹೋದರಿಯರು ನೀತಿವಂತರಂತೆ ತೋರುತ್ತಾರೆ. ಯಾಕೆಂದರೆ ನಿನ್ನ ಪಾಪಗಳು ಬಹಳ ಅಸಹ್ಯವಾಗಿದ್ದವು. ಆದ್ದರಿಂದ ನಿನಗೆ ಅವಮಾನವಾಗಲೇಬೇಕು; ನೀನು ನಾಚಿಕೆಯನ್ನು ಅನುಭವಿಸಲೇಬೇಕು ಯಾಕೆಂದರೆ ನೀನು ನಿನ್ನ ಸಹೋದರಿಯರನ್ನು ನಿರಪರಾಧಿಗಳಾಗಿ ಕಾಣುವಂತೆ ಮಾಡಿರುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು. ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ. ಅವರು ನಿನಗಿಂತ ನೀತಿವಂತರು. ಹೌದು, ನೀನು ನಿನ್ನ ಸಹೋದರಿಯರನ್ನು ನೀತಿವಂತರೆಂದು ತೋರ್ಪಡಿಸಿದ್ದರಿಂದ ನೀನೇ ನಾಚಿಕೆಪಟ್ಟು, ನಿನ್ನ ನಿಂದೆಯನ್ನು ಹೊತ್ತುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:52
27 ತಿಳಿವುಗಳ ಹೋಲಿಕೆ  

ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ಅಂತೆಯೇ, ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ಸತ್ಕಾರ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಮಹಿಮೆ, ಗೌರವ, ಶಾಂತಿ ಲಭಿಸುತ್ತವೆ.


ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


“ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ.


ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು.


ನನಗೆ ಯಾಜಕ ಸೇವೆಮಾಡುವುದಕ್ಕೆ ಅವರು ನನ್ನ ಸನ್ನಿಧಿಗೆ ಬರಕೂಡದು. ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು. ತಮಗಾದ ಅವಮಾನವನ್ನೂ ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಅರಾಮಿನ ಕುವರಿಯರು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುವರಿಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮುಂಚೆ, ನಿನ್ನ ಕೆಟ್ಟತನವು ಬೆಳಕಿಗೆ ಬರುವುದಕ್ಕೆ ಮೊದಲು,


ಹೀಗಿರಲು, ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವೆ, ನಾಚಿಕೆಪಡುವೆ.


‘ನಿಂದೆಯನ್ನು ಕೇಳಿ ನಾವು ಲಜ್ಜೆಗೊಂಡೆವು, ಮ್ಲೇಚ್ಛರು ಸರ್ವೇಶ್ವರನ ಪವಿತ್ರಾಲಯವನ್ನು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಆವರಿಸಿದೆ,’ ಎನ್ನುತ್ತೀರೋ?


ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”


ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”


ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತ; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದೆ.


ಯೆಹೂದನು ಅವುಗಳ ಗುರುತುಹಚ್ಚಿದನು. “ನಾನು ನನ್ನ ಮಗ ಶೇಲಹನನ್ನು ಆಕೆಗೆ ಮದುವೆ ಮಾಡದೆಹೋದೆ. ಈ ಕಾರಣ ನನಗಿಂತ ಆಕೆಯೇ ನೀತಿವಂತಳು,” ಎಂದುಕೊಂಡನು. ಇದಾದ ಬಳಿಕ ಅವನು ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.


ಬಳಿಕ ಸರ್ವೇಶ್ವರ ಸ್ವಾಮಿ ನನಗೆ ಇಂತೆಂದರು - “ಭ್ರಷ್ಟಳಾದ ಇಸ್ರಯೇಲ್ ದ್ರೋಹಿಯಾದ ಜುದೇಯಳಿಗಿಂತ ಶಿಷ್ಟಳಾಗಿ ಕಂಡುಬಂದಿದ್ದಾಳೆ.


“ಆದರೆ ನೀನು ನಡೆದ ದುರ್ಮಾರ್ಗ ಅವರು ನಡೆದಂಥದಲ್ಲ. ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ. ಅವರ ದುರ್ನಡತೆ ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನೀನೂ ನಿನ್ನ ಕುವರಿಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ ಆಕೆಯ ಕುವರಿಯರಾಗಲಿ ನಡೆಯಲಿಲ್ಲ.


“ಸೊದೋಮ್ ಮತ್ತು ಆಕೆಯ ಕುವರಿಯರ ಹಾಗೂ ಸಮಾರಿಯ ಮತ್ತು ಆಕೆಯ ಕುವರಿಯರ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.


“ಏಲಾಮೂ ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿವೆ.ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರವಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು