Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:16 - ಕನ್ನಡ ಸತ್ಯವೇದವು C.L. Bible (BSI)

16 “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇಮಕಗೊಂಡನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಪ್ಪಂದವನ್ನು ಮೀರಿದನೋ, ಆ ಅರಸನ ಬಳಿಯಲ್ಲೆ, ಅಂದರೆ ಬಾಬಿಲೋನೆಂಬ ಅವನ ವಾಸಸ್ಥಾನದಲ್ಲೆ, ಇವನು ಸಾಯುವುದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇವನು ಯಾರಿಂದ ಅರಸನಾಗಿ ನೇಮಿಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾರ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವುದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇವಿುಸಲ್ಪಟ್ಟನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ಆ ಅರಸನ ಬಳಿಯಲ್ಲಿ, ಅಂದರೆ ಬಾಬೆಲೆಂಬ ಅವನ ವಾಸಸ್ಥಾನದಲ್ಲಿ ಇವನು ಸಾಯುವದು ಖಂಡಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ಈ ಹೊಸ ರಾಜನು ಬಾಬಿಲೋನಿನಲ್ಲಿ ಸಾಯುವನು. ಈ ಮನುಷ್ಯನನ್ನು ಯೆಹೂದದ ರಾಜನನ್ನಾಗಿ ಮಾಡಿದ ರಾಜ ನೆಬೂಕದ್ನೆಚ್ಚರನ ನಾಡಿನಲ್ಲಿ ಇವನು ಸಾಯುವನು. ಈ ಮನುಷ್ಯನು ಆ ರಾಜನೊಡನೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿ ಆ ರಾಜನೊಡನೆ ಮಾಡಿಕೊಂಡಿದ್ದ ಒಪ್ಪಂದವನ್ನು ಮುರಿದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ನಿಶ್ಚಯವಾಗಿ ಯಾವನಿಂದ ಅರಸನಾಗಿ ಆಯ್ಕೆಗೊಂಡನೋ ಎಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ನನ್ನ ಜೀವದಾಣೆ ಅವನು ಇರುವಲ್ಲಿಯೇ ಬಾಬಿಲೋನಿನ ಮಧ್ಯದಲ್ಲಿ ಇವನು ಸಾಯುವನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:16
25 ತಿಳಿವುಗಳ ಹೋಲಿಕೆ  

ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು: ಬಾಬಿಲೋನಿಯಾ ದೇಶದ ಬಾಬಿಲೋನ್ ನಗರಕ್ಕೆ ಅವನನ್ನು ಒಯ್ಯುವೆನು; ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ಇದಲ್ಲದೆ ಬಾಬಿಲೋನಿಯದ ಆ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನು ಕಿತ್ತು ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟ.


ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಪ್ಪಂದಮಾಡಿ ಅವನಿಂದ ಆಣೆಯಿಡಿಸಿದ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದೆ. ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.


ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.


ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II


ಬಾಬಿಲೋನಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ‘ಚಿದ್ಕೀಯ’ ಎಂಬ ಹೆಸರಿಟ್ಟನು.


(ಗಿಬ್ಯೋನ್ಯರು ಇಸ್ರಯೇಲ್ ಕುಲಗಳಿಗೆ ಸೇರಿದವರಲ್ಲ; ಅವರು ಅಳಿಯದೆ ಉಳಿದ ಅಮೋರಿಯರಷ್ಟೇ). ಇಸ್ರಯೇಲರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿ ಇದ್ದರು. ಆದರೂ ಸೌಲನು ಇಸ್ರಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನೂ ನಿರ್ನಾಮಗೊಳಿಸಬೇಕೆಂದಿದ್ದನು.


ನಾವು ಇಟ್ಟ ಅಪ್ಪಣೆಯ ನಿಮಿತ್ತ ದೇವರ ಕೋಪ ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದ ಉಳಿಸಬೇಕು. ನಾವು ಹೀಗೆ ಮಾಡೋಣ: ಅವರನ್ನು ಬದುಕಲು ಬಿಟ್ಟುಬಿಡಿ.


“ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ಮೀರದೆ ನುಡಿದಂತೆ ನೆರವೇರಿಸಬೇಕು.


ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.


ಕೊಡದೆ ಹೋದರೆ ನಿನ್ನ ದೇಶಕ್ಕೆಲ್ಲಾ ಕಪ್ಪೆಗಳ ಕಾಟ ತಗಲುವಂತೆ ಮಾಡುವೆನು.


ಅವರು ಮಮತೆ ಇಲ್ಲದವರೂ ಸಮಾಧಾನ ಸಹಿಸದವರೂ ಚಾಡಿಕೋರರೂ ಸ್ವೇಚ್ಛಾವರ್ತಿಗಳೂ ಕ್ರೂರಿಗಳೂ ಒಳಿತನ್ನು ದ್ವೇಷಿಸುವವರೂ ಆಗುವರು.


ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.


ಮಾತ್ರವಲ್ಲ, ಅವರು ಅವಿವೇಕಿಗಳು, ಅಪ್ರಾಮಾಣಿಕರು, ನಿಷ್ಕರುಣಿಗಳು ಮತ್ತು ನಿರ್ದಯಿಗಳು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಅವರು ಹರಟೆಹೊಡೆಯುತ್ತಾರೆ; ಸುಳ್ಳಾಣೆ ಇಟ್ಟು ಸಂಧಾನಮಾಡಿಕೊಳ್ಳುತ್ತಾರೆ. ಉತ್ತಹೊಲದಲ್ಲಿ ಬೆಳೆಯುವ ವಿಷದ ಕಳೆಗಳಂತೆ ನ್ಯಾಯಸ್ಥಾನಕ್ಕೆ ಬರುವ ಅವರ ವಾದವಿವಾದಗಳು ಹೆಚ್ಚಿಕೊಳ್ಳುತ್ತವೆ.


ನಾಟಿಕೊಂಡಿದ್ದ ಆ ಲತೆ ಸಮೃದ್ಧವಾಗಿಯೇ ಇರುವುದೇ? ಮೂಡಣಗಾಳಿ ಬಡಿಯುವಾಗ ಅದು ಖಂಡಿತವಾಗಿ ಬಾಡುವುದಲ್ಲವೆ? ಬೆಳೆದ ಪಾತಿಯಲ್ಲಿಯೇ ಅದು ಒಣಗಿಹೋಗುವುದಲ್ಲವೆ?”


ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


ಜುದೇಯದ ಅರಸ ಚಿದ್ಕೀಯನನ್ನೂ ಅವನ ಮಂತ್ರಿಗಳನ್ನೂ ಅವರ ಶತ್ರುಗಳಿಗೆ ಅಂದರೆ, ಅವರ ಪ್ರಾಣಹತ್ಯಕ್ಕಾಗಿ ಕಾದಿರುವ, ತಕ್ಷಣಕ್ಕೆ ಹಿಂದಿರುಗಿಹೋಗಿರುವ, ಬಾಬಿಲೋನಿಯದ ಅರಸನ ಕೈಗೆ ಕೊಡುವೆನು.


ಆದರೆ ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸೆಯಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವರು ತನ್ನ ಕೈಗೆ ಸಿಕ್ಕಿಬೀಳಲೆಂದು ಅವರ ಅಧರ್ಮವನ್ನು ಅವನು ಬೆಳಕಿಗೆ ತರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು