Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:2 - ಕನ್ನಡ ಸತ್ಯವೇದವು C.L. Bible (BSI)

2 “ಹೆತ್ತವರು ತಿಂದರು ಹುಳಿದ್ರಾಕ್ಷಿಯನ್ನು; ಚಳಿತುಹೋದವು ಅವರ ಮಕ್ಕಳ ಹಲ್ಲುಗಳು” ಎಂಬ ಗಾದೆಯನ್ನು ನೀವು ಇಸ್ರಯೇಲ್‍ ನಾಡನ್ನು ಕುರಿತು ಹೇಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದರು ಆದರೆ, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವುದೇಕೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತಂದೆಗಳು ಹುಳಿದ್ರಾಕ್ಷೆಯನ್ನು ತಿಂದರು, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲ್ ದೇಶದ ಕುರಿತಾದ ಈ ಗಾದೆಯನ್ನು ನೀವೆಲ್ಲರೂ ಮರುನುಡಿಯುವುದೇಕೆ? ‘ಹೆತ್ತವರು ಹುಳಿ ದ್ರಾಕ್ಷಿಹಣ್ಣನ್ನು ತಿಂದಾಗ ಮಕ್ಕಳ ಬಾಯಿ ಹುಳಿಯಾಗುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಈ ಗಾದೆಯನ್ನು ಉಲ್ಲೇಖಿಸುವುದರ ಅರ್ಥವೇನು: “ ‘ಪಿತೃಗಳು ಹುಳಿದ್ರಾಕ್ಷಿಗಳನ್ನು ತಿಂದರು, ಮಕ್ಕಳ ಹಲ್ಲು ಚಳಿತು ಹೋಯಿತು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:2
21 ತಿಳಿವುಗಳ ಹೋಲಿಕೆ  

ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು.


ಆಗ ನೀನು ಅವರಿಗೆ, “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ, ‘ಇಗೋ, ಎಫ್ರಯಿಮು ಹಿಡಿದಿರುವ ದಂಡವನ್ನು ಅಂದರೆ, ಜೋಸೆಫನ ಮತ್ತು ಜೋಸೆಫನಿಗೆ ಸೇರಿದ ಇಸ್ರಯೇಲ್ ಕುಲಗಳ ದಂಡವನ್ನು ನಾನು ತೆಗೆದು ಜುದೇಯದ ದಂಡಕ್ಕೆ ಉದ್ದವಾಗಿ ಸೇರಿಸಿ ಅವೆರಡನ್ನು ನನ್ನ ಕೈಯಲ್ಲಿ ಒಂದೇ ದಂಡವಾಗಿ ಹಿಡಿಯುವೆನು’ ಎಂಬುದನ್ನು ಹೇಳು.


ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


“ದ್ರೋಹಿವಂಶದ ಈ ಜನರಿಗೆ ಹೀಗೆ ಹೇಳು - ಇದರ ಅರ್ಥ ನಿಮಗೆ ತಿಳಿಯಲಿ; ಇಗೋ, ಬಾಬಿಲೋನಿನ ಅರಸನು ಜೆರುಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದ;


ನೀವು ನನ್ನ ಜನರನ್ನು ನಸುಕಿಬಿಟ್ಟಿದ್ದೀರಲ್ಲವೇ? ಬಡವರನ್ನು ಹಿಸುಕಿಬಿಟ್ಟಿದ್ದೀರಲ್ಲವೇ?” ಎಂದು ಸೇನಾಧೀಶ್ವರ ಸರ್ವೇಶ್ವರಸ್ವಾಮಿ ವಾದಿಸುತ್ತಾರೆ.


ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?


ಹೌದು, ಇದೆಲ್ಲವೂ ಈ ಪೀಳಿಗೆಯ ಮೇಲೆ ಬರುವುದೆಂದು ನಿಮಗೆ ಒತ್ತಿ ಹೇಳುತ್ತೇನೆ.


ಸರ್ವೇಶ್ವರನಾದ ದೇವರ ವಾಕ್ಯವನ್ನು ಕೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದುದ್ದನ್ನು, ಇಸ್ರಯೇಲ್ ನಾಡು ಪಾಳುಬಿದ್ದುದನ್ನು, ಯೆಹೂದ್ಯವಂಶದವರು ಗಡೀಪಾರಾದುದನ್ನು ನೋಡಿ ನೀನು ಹಿರಿಹಿರಿ ಹಿಗ್ಗಿಹೋದೆ.


ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”


“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’


ದುಷ್ಟ ತಂದೆಯ ಪಾಪಫಲವನು ಮಕ್ಕಳಿಗೆ ಕಾದಿಟ್ಟಿದ್ದಾರೆಯೇ ದೇವರು? ಅವನಿಗೇ ಆ ದಂಡನೆ ಆಗಲಿ ಆ ದುಷ್ಟನೇ ಅದನ್ನು ಅನುಭವಿಸಲಿ.


“ನರಪುತ್ರನೇ, ‘ಕ್ಲುಪ್ತಕಾಲ ದೂರ ದೂರ ಹೋಗುತ್ತಲಿದೆ, ದಿವ್ಯದರ್ಶನಗಳೆಲ್ಲಾ ನಿರರ್ಥಕ’ ಎಂಬುದಾಗಿ ಇಸ್ರಯೇಲ್ ನಾಡಿನವರು ಆಡಿಕೊಳ್ಳುವ ಈ ಗಾದೆ ಏನು?


“ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ಬಗ್ಗೆ ಖಂಡಿತವಾಗಿ ನುಡಿಯುವರು.


ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ:


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.


“ಆದರೆ ನೀವು, - ‘ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವುದಿಲ್ಲ?’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ ನನ್ನ ವಿಧಿಗಳನ್ನೆಲ್ಲಾ ಕೈಗೊಂಡು ಆಚರಿಸಿದರೆ ಖಂಡಿತ ಜೀವಿಸುವನು.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು