Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:23 - ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವುಂಟೋ? ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನಗೆ ಪಾಪಿಗಳು ಸಾಯುವದರಲ್ಲಿ ಇಷ್ಟವಿಲ್ಲ. ಅವರು ತಮ್ಮ ಜೀವಿತವನ್ನು ಬದಲಾಯಿಸಿ ಜೀವವನ್ನು ಹೊಂದಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದುಷ್ಟನು ಸಾಯುವುದರಲ್ಲಿ ನನಗೆ ಸ್ವಲ್ಪ ಸಂತೋಷವಿರುವುದೋ?” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ. “ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ಬದುಕಿದರೆ ನನಗೆ ಸಂತೋಷವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:23
18 ತಿಳಿವುಗಳ ಹೋಲಿಕೆ  

ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ಎಲ್ಲಾ ಮಾನವರೂ ಸತ್ಯವನ್ನರಿತು ಜೀವೋದ್ಧಾರ ಪಡೆಯಬೇಕೆಂಬುದೇ ದೈವೇಚ್ಛೆ.


ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪಕ್ಕೆ ವಿಮುಖರಾಗಿ ಜೀವಿಸಿರಿ; ಇದು ಸರ್ವೇಶ್ವರನಾದ ದೇವರ ನುಡಿ.”


ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ನರಮಾನವರನ್ನು ಹಿಂಸಿಸಿ ದುಃಖಪಡಿಸುವುದು ಆತನಿಗೆ ಎಷ್ಟುಮಾತ್ರಕ್ಕೂ ಇಷ್ಟವಿಲ್ಲ.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು