Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:6 - ಕನ್ನಡ ಸತ್ಯವೇದವು C.L. Bible (BSI)

6 ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿನ್ನದೆ ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ ನೆರೆಯವನ ಹೆಂಡತಿಯನ್ನು ಕೆಡಿಸದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ನೀತಿವಂತ ಮನುಷ್ಯನು ಬೆಟ್ಟಗಳಿಗೆ ಹೋಗಿ ಅಲ್ಲಿ ಸುಳ್ಳು ದೇವರಿಗೆ ಅರ್ಪಿಸಿದ ಆಹಾರದಲ್ಲಿ ಪಾಲು ತೆಗೆದುಕೊಳ್ಳುವದಿಲ್ಲ. ಇಸ್ರೇಲಿನಲ್ಲಿರುವ ಆ ಹೊಲಸು ವಿಗ್ರಹಗಳಿಗೆ ಅವನು ಪ್ರಾರ್ಥಿಸುವುದಿಲ್ಲ. ಅವನು ತನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ. ತನ್ನ ಹೆಂಡತಿಯು ಮುಟ್ಟಾದಾಗ ಆಕೆಯನ್ನು ಕೂಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾಗಿರುವ ಸ್ತ್ರೀಯನ್ನು ಸಮೀಪಿಸದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:6
25 ತಿಳಿವುಗಳ ಹೋಲಿಕೆ  

ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ, ಯಾರನ್ನೂ ಹಿಂಸಿಸದೆ,


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಆದ್ದರಿಂದ ನಾನು ‘ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು’ ಎಂದು ಮರುಭೂಮಿಯಲ್ಲಿ ಪ್ರಮಾಣಮಾಡಿ ಹೇಳಿದೆ.


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೆ, ಎಲ್ಲಾ ಬೆಟ್ಟಗಳ ತುದಿಗಳಲ್ಲಿ, ಸೊಂಪಾದ ಎಲ್ಲಾ ಮರಗಳ ಕೆಳಗೆ ಹಾಗು ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಮರಗಳ ಕೆಳಗೆ ಹತರಾಗಿ, ತಮ್ಮ ಯಜ್ಞವೇದಿಕೆಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.


ಆ ಮಹಿಳೆಯರು ತಮ್ಮ ದೇವತೆಗಳಿಗೆ ಮಾಡಿದ ಬಲಿಔತಣಗಳಲ್ಲಿ ಭಾಗಿಗಳಾಗಲು ಇಸ್ರಯೇಲರನ್ನು ಆಹ್ವಾನಿಸುತ್ತಿದ್ದರು. ಇವರು ಪ್ರಸಾದ ಸ್ವೀಕರಿಸಿ ಆ ದೇವತೆಗಳಿಗೆ ತಲೆಬಾಗುತ್ತಿದ್ದರು.


ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದ್ದರಿಂದ ಅವರಿಬ್ಬರೂ ಕುಲದಿಂದ ತೆಗೆದುಹಾಕಲ್ಪಡಬೇಕು.


“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಯಾವುದೂ ಅಲ್ಲ. ನಾನು ಹೇಳುವುದೇನೆಂದರೆ : ಅನ್ಯಜನರು ಬಲಿಯನ್ನು ದೆವ್ವಗಳಿಗೆ ಅರ್ಪಿಸುತ್ತಾರೆ ಹೊರತು ದೇವರಿಗಲ್ಲ. ಹೀಗೆ ನೀವು ದೆವ್ವಗಳೊಂದಿಗೆ ಭಾಗಿಯಾಗುವುದನ್ನು ನಾನೆಂದಿಗೂ ಇಷ್ಟಪಡುವುದಿಲ್ಲ.


ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.


‘ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಡಿಬಿಡಿ; ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿ; ನಾನು ನಿಮ್ಮ ದೇವರಾದ ಸರ್ವೇಶ್ವರ’ ಎಂದು ಅವರನ್ನು ಎಚ್ಚರಿಸಿದೆ.


ಕಣ್ಣೆತ್ತಿ ನಾ ನೋಡುವೆ ಪರ್ವತದತ್ತ I ಕೇಳುವೆ : “ನನಗೆ ಒತ್ತಾಸೆ ಎತ್ತಣಿಂದ?” II


ನೀವು ಆ ನಾಡಿನ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಜಾಗರೂಕರಾಗಿರಿ. ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಬಲಿಯರ್ಪಿಸುವಾಗ ಬಲಿ ಭೋಜನಕ್ಕೆ ನಿಮ್ಮನ್ನು ಕರೆಯಬಹುದು. ನೀವು ಹೋಗಿ ಅದನ್ನು ಭುಜಿಸುವ ಸಂಭವವುಂಟು.


ಅಂತೆಯೆ ನೆರೆಯವನ ಸತಿಯನ್ನು ಕೂಡುವವನ ಗತಿಯು; ಆಕೆಯನ್ನು ಮುಟ್ಟುವವನು ತಪ್ಪಿಸಿಕೊಳ್ಳನು ದಂಡನೆಯನ್ನು.


“ಒಬ್ಬನು ಸದ್ಧರ್ಮಿಯಾಗಿ ನ್ಯಾಯನೀತಿಗಳನ್ನು ನಡೆಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು