Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:7 - ಕನ್ನಡ ಸತ್ಯವೇದವು C.L. Bible (BSI)

7 ನೆಲಸಮ ಮಾಡಿತು ಪಟ್ಟಣಗಳನೆ ನಾಶಮಾಡಿತು ಕೋಟೆಕೊತ್ತಲುಗಳನೆ ನಾಡಿಗೆ ನಾಡೇ ನಡುಗಿತು ಅದರ ಗರ್ಜನೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದು ಪಟ್ಟಣಗಳನ್ನು ಹಾಳುಮಾಡಿ, ಬಹಳ ಮಂದಿ ವಿಧವೆಯರಾದವರನ್ನು ಕೆಡಿಸಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವು ಮತ್ತು ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದು ಪಟ್ಟಣಗಳನ್ನು ಹಾಳುಮಾಡಿ [ಬಹುಮಂದಿ] ವಿಧವೆಯರಾದವರನ್ನು ಕಂಡಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವೂ ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದು ಸ್ತ್ರೀಯರನ್ನು ವಿಧವೆಯರನ್ನಾಗಿ ಮಾಡಿತು; ಪಟ್ಟಣಗಳನ್ನು ನಿರ್ಜನವನ್ನಾಗಿ ಮಾಡಿತು; ಅದು ಗರ್ಜಿಸಿದಾಗ ದೇಶವೂ ಅದರಲ್ಲಿರುವ ಪ್ರತಿಯೊಂದೂ ಭಯಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ಅರಮನೆಗಳನ್ನು ಹಾಳುಮಾಡಿತು, ಅವರ ನಗರಗಳನ್ನೂ ನಾಶಮಾಡಿತು, ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, ಅದರಲ್ಲಿದ್ದ ಎಲ್ಲರೂ ದಂಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:7
14 ತಿಳಿವುಗಳ ಹೋಲಿಕೆ  

ನಾನು ನದೀ ಶಾಖೆಗಳನ್ನು ಬತ್ತಿಸಿ, ದೇಶವನ್ನು ದುಷ್ಟರ ಕೈಗೆ ವಶಮಾಡಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಸರ್ವೇಶ್ವರನಾದ ನಾನೇ ನುಡಿದಿದ್ದೇನೆ.”


ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ. ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿನ ಜೆರುಸಲೇಮ್ ನಿವಾಸಿಗಳನ್ನೂ ಕುರಿತು ಇಂತೆನ್ನುತ್ತಾರೆ: ‘ಅವರು ಅನ್ನವನ್ನು ಅಂಜಿಕೆಯಿಂದ ತಿಂದು ನೀರನ್ನು ನಡುಕದಿಂದ ಕುಡಿಯುವರು: ಏಕೆಂದರೆ ಆ ನಾಡಿನಲ್ಲಿರುವವರು ಹಿಂಸಾಚಾರಿಗಳು; ಈ ಕಾರಣ, ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ನಾಡು ಬರಿದಾಗುವುದು.


ದಲಿತರನ್ನೇ ಹಿಂಸಿಸುವ ಬಡವ, ಕಾಳೂ ಉಳಿಯದಂತೆ ಜಡಿಯುವ ಮಳೆಗೆ ಸಮಾನ.


ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.


ಇದು ಕೂಡ ಯುವಸಿಂಹವಾಯಿತು ಇತರ ಸಿಂಹಗಳ ನಡುವೆ ತಿರುಗಾಡಿತು. ಬೇಟೆಯಾಡುವುದನು ಕಲಿತು ತಾನೂ ನರಭಕ್ಷಕನಾಗಲಾರಂಭಿಸಿತು.


ಆಗ ಬಂದವು ಸುತ್ತಲಿನ ರಾಷ್ಟ್ರಗಳು ಒಟ್ಟುಗೂಡಿ, ಸಿಕ್ಕಿಸಿದವು ಅದನ್ನು ಬಲೆಯೊಡ್ಡಿ, ಗುಂಡಿತೋಡಿ.


ಅದು ಅವನಿಗೆ ಇಸ್ರಯೇಲಿನಲ್ಲಿ ಭೂಸೊತ್ತಾಗುವುದು; ಇನ್ನು ಮೇಲೆ ರಾಜರುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ನಾಡಿನ ಭೂಮಿಯನ್ನು ಇಸ್ರಯೇಲರಿಗೆ ಕುಲಕುಲಕ್ಕೂ ಹಂಚುವರು.


ಫರೋಹ ನೆಕೋವನು ಇವನನ್ನು ಜೆರುಸಲೇಮಿನಲ್ಲಿ ಬಹುದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ದಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು