Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:16 - ಕನ್ನಡ ಸತ್ಯವೇದವು C.L. Bible (BSI)

16 ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಏಕಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನನ್ನ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಅವರ ಮನಸ್ಸು ಆ ಹೊಲಸು ದೇವರುಗಳ ಮೇಲೆ ನೆಟ್ಟಿದ್ದರಿಂದ ಅವರು ಹಾಗೆಲ್ಲಾ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ವಿಶ್ರಾಂತಿಯ ದಿನಗಳನ್ನು ಅಪವಿತ್ರ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:16
11 ತಿಳಿವುಗಳ ಹೋಲಿಕೆ  

ಆ ಗೊಂಡೆಗಳ ಪ್ರಯೋಜನವಿದು - ನೀವು ಅವುಗಳನ್ನು ನೋಡುವಾಗ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅವುಗಳನ್ನು ಪಾಲಿಸಬೇಕು. ಹಿಂದೆ ನೀವು ನನಗೆ ದ್ರೋಹಿಗಳಾಗಿ ನಿಮ್ಮ ಮನಸ್ಸಿಗೆ ಬಂದಂತೆ, ಕಣ್ಣಿಗೆ ತೋರಿದಂತೆ ದಾರಿತಪ್ಪಿ ನಡೆದಿರಿ.


ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ.


ಅವಳು ಈಜಿಪ್ಟಿನಲ್ಲಿ ಇದ್ದಂದಿನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಬಾಲ್ಯದಲ್ಲಿಯೇ ಅಲ್ಲಿಯವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ನಸುಕಿ, ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.


ಆ ಮಹಿಳೆಯರು ತಮ್ಮ ದೇವತೆಗಳಿಗೆ ಮಾಡಿದ ಬಲಿಔತಣಗಳಲ್ಲಿ ಭಾಗಿಗಳಾಗಲು ಇಸ್ರಯೇಲರನ್ನು ಆಹ್ವಾನಿಸುತ್ತಿದ್ದರು. ಇವರು ಪ್ರಸಾದ ಸ್ವೀಕರಿಸಿ ಆ ದೇವತೆಗಳಿಗೆ ತಲೆಬಾಗುತ್ತಿದ್ದರು.


ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”


ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು