Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:18 - ಕನ್ನಡ ಸತ್ಯವೇದವು C.L. Bible (BSI)

18 ಆಮೇಲೆ ನಾನು ಅವರ ಸಂತಾನದವರಿಗೆ - ‘ನೀವು ನಿಮ್ಮ ಪಿತೃಗಳ ಕಟ್ಟಳೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಗೊಳ್ಳದೆ ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, “ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ - ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಕೊಳ್ಳದೆ ಅವರ ಬೊಂಬೆಗಳಿಂದ ನಿಮ್ಮನ್ನು ಹೊಲಸುಮಾಡಿಕೊಳ್ಳದೆ ಇರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರ ಮಕ್ಕಳಿಗೆ ನಾನು ಬುದ್ಧಿಹೇಳುತ್ತಾ, “ನಿಮ್ಮ ಪೂರ್ವಿಕರಂತೆ ನೀವಾಗಬೇಡಿರಿ. ಅವರ ಅಸಹ್ಯವಾದ ವಿಗ್ರಹಗಳಿಂದ ನಿಮ್ಮನ್ನು ನೀವು ಅಶುದ್ಧಮಾಡಿಕೊಳ್ಳಬೇಡಿರಿ. ಅವರ ಕಟ್ಟಳೆಗಳನ್ನು ಅನುಸರಿಸಬೇಡಿರಿ. ಅವರ ಆಜ್ಞೆಗಳಿಗೆ ವಿಧೇಯರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮರುಭೂಮಿಯಲ್ಲಿ ನಾನು ಅವರ ಮಕ್ಕಳಿಗೆ ಹೇಳಿದ್ದೇನೆಂದರೆ, “ನೀವು ನಿಮ್ಮ ತಂದೆಗಳ ನಿಯಮಗಳನ್ನು ಅನುಸರಿಸಬೇಡಿರಿ, ಅವರ ನ್ಯಾಯಗಳನ್ನು ಕೈಕೊಳ್ಳಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:18
19 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.


‘ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಡಿಬಿಡಿ; ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿ; ನಾನು ನಿಮ್ಮ ದೇವರಾದ ಸರ್ವೇಶ್ವರ’ ಎಂದು ಅವರನ್ನು ಎಚ್ಚರಿಸಿದೆ.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಕಲ್ಲುಮರಗಳಿಗೆ ಆರಾಧನೆಮಾಡಿ ವ್ಯಭಿಚಾರಿಣಿಯಾದಳು. ಇದೆಲ್ಲ ಲಘುವೆಂದು ಭಾವಿಸಿ ತನ್ನ ವೇಶ್ಯಾ ವರ್ತನೆಯಿಂದ ನಾಡನ್ನು ಅಪವಿತ್ರಪಡಿಸಿದಳು.


ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.


ಆದರೆ ನಿಮ್ಮ ಮಕ್ಕಳನ್ನು, ಪರರ ಪಾಲಾಗುವರು ಎಂದು ಹೇಳಿದ ನಿಮ್ಮ ಚಿಕ್ಕಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದ ನಾಡನ್ನು ಅವರು ಅನುಭವಿಸುವರು.


ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II


ನನ್ನ ಮಾತನ್ನು ಕೇಳದೆಹೋದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆ ಈ ಜನರು ತಿರುಗಿಕೊಂಡಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸುತ್ತಿದ್ದಾರೆ. ಅವುಗಳನ್ನು ಪೂಜಿಸುತ್ತಿದ್ದಾರೆ. ನಾನು ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ಮೀರಿದ್ದಾರೆ.


ಅವರು ನನಗೆ ಹೀಗೆ ಹೇಳಿದರು, “ನರಪುತ್ರನೇ, ನನಗೆ ವಿಮುಖರಾಗಿ ದ್ರೋಹಮಾಡಿದ ಜನಾಂಗದವರಾದ ಇಸ್ರಯೇಲರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನ್ನನ್ನು ಪ್ರತಿಭಟಿಸುತ್ತಲೇ ಬಂದಿದ್ದಾರೆ.


“ಆದರೆ ನೀವು, - ‘ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವುದಿಲ್ಲ?’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ ನನ್ನ ವಿಧಿಗಳನ್ನೆಲ್ಲಾ ಕೈಗೊಂಡು ಆಚರಿಸಿದರೆ ಖಂಡಿತ ಜೀವಿಸುವನು.


ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


“ಇಗೋ, ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು, ಇಂಥಾ ಕಾರ್ಯಗಳನ್ನು ನಡೆಸದೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು