Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:28 - ಕನ್ನಡ ಸತ್ಯವೇದವು C.L. Bible (BSI)

28 ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:28
24 ತಿಳಿವುಗಳ ಹೋಲಿಕೆ  

ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೆ, ಎಲ್ಲಾ ಬೆಟ್ಟಗಳ ತುದಿಗಳಲ್ಲಿ, ಸೊಂಪಾದ ಎಲ್ಲಾ ಮರಗಳ ಕೆಳಗೆ ಹಾಗು ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಮರಗಳ ಕೆಳಗೆ ಹತರಾಗಿ, ತಮ್ಮ ಯಜ್ಞವೇದಿಕೆಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.


ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.


ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.


ಈಗ ನಾನು, ಭೂನಿವಾಸಿಗಳೆಲ್ಲರು ಹಿಡಿಯುವ ಹಾದಿಯನ್ನು ಹಿಡಿಯಬೆಕಾಗಿದೆ. ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿವೆ ಎಂಬುದು ನಿಮಗೆ ಮನದಟ್ಟಾಗಿರಲಿ.


ಆಮೇಲೆ, ‘ನಾಡುಗಳಲ್ಲೆಲ್ಲಾ ಶ್ರೇಷ್ಠವಾದ ನಾಡಿಗೆ, ಹಾಲೂ ಜೇನೂ ಹರಿಯುವ ಆ ವಾಗ್ದತ್ತನಾಡಿಗೆ ನಿಮ್ಮನ್ನು ಸೇರಿಸೆನು’ ಎಂದು ಮರುಭೂಮಿಯಲ್ಲಿ ಅವರಿಗೆ ಪ್ರಮಾಣಮಾಡಿ ಹೇಳಿದೆ.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು, ಇವುಗಳನ್ನೂ, ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ನಿನಗೆ ಕೇಡು! ಇದು ಸರ್ವೇಶ್ವರನಾದ ದೇವರ ನುಡಿ.


ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳ ಮೇಲೆ ಧೂಪಾರತಿ ಎತ್ತಿ ನನ್ನನ್ನು ಅವಮಾನಗೊಳಿಸಿದ್ದಾರೆ. ತಕ್ಕ ಪ್ರತೀಕಾರವನ್ನು ಎಸಗುವೆನು ಈ ಅಪರಾಧಗಳಿಗೆ. ಹೌದು, ಮೊಟ್ಟಮೊದಲು ಪ್ರತೀಕಾರ ಇವರ ಕಾರ್ಯಕ್ಕೆ; ಅದನ್ನು ಸರಿಯಾಗಿ ಅಳೆದು ಸುರಿಸುವೆನು ಇವರ ಮಡಿಲಿಗೆ.”


ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.”


“ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ.


ನೀವು ಹೋಗುವ ‘ಬಾ - ಮಾ’ ಎಂಬ ಪೂಜಾಸ್ಥಳ ಎಂಥ ಸ್ಥಳ? (ಇಂದಿನವರೆಗೂ ಇಂಥಾ ಪೂಜಾಸ್ಥಳಗಳಿಗೆ ಬಾಮಾ ಎಂದೇ ಹೆಸರು).


ಏಕೆಂದರೆ ಬಲಿಪ್ರಾಣಿಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು ಸರ್ವೇಶ್ವರನ ಮುಂದೆ ಶಾಂತಿಸಮಾಧಾನದ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


ತಮ್ಮ ದೇವರಾದ ಆ ಸರ್ವೇಶ್ವರನಿಗೆ ವಿರೋಧವಾದ ಕೃತ್ಯಗಳನ್ನು ಗುಪ್ತವಾಗಿ ನಡೆಸಿದರು; ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು;


ಎಲ್ಲಾ ದಿಣ್ಣೆಗಳ ಮೇಲೆ ಮತ್ತು ಎಲ್ಲಾ ಹಸಿರು ಮರಗಳ ಕೆಳಗೆ ಕಲ್ಲುಗಂಬ, ಅಶೇರುವಿಗ್ರಹಸ್ಥಂಭ ಇವುಗಳನ್ನು ಸ್ಥಾಪಿಸಿದರು.


ಸರ್ವೇಶ್ವರನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು.


ಇಸ್ರಯೇಲ್ ವಂಶವೂ ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿದೆ. ಹೌದು, ಇಸ್ರಯೇಲ್ ವಂಶದವರು ತಮ್ಮ ಕೈಕೆಲಸದ ವಿಗ್ರಹಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು