Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:38 - ಕನ್ನಡ ಸತ್ಯವೇದವು C.L. Bible (BSI)

38 ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನನಗೆ ವಿರೋಧವಾಗಿ ಎದ್ದು ಪಾಪಮಾಡಿದ ಜನರನ್ನು ಅವರ ಸ್ವದೇಶದಿಂದ ತೆಗೆದುಬಿಡುವೆನು. ಅವರು ಇನ್ನೆಂದಿಗೂ ಇಸ್ರೇಲ್ ದೇಶಕ್ಕೆ ಹಿಂತಿರುಗಿ ಬರುವುದೇ ಇಲ್ಲ. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:38
26 ತಿಳಿವುಗಳ ಹೋಲಿಕೆ  

ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.


ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II


ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನುಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು.


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.


ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”


ನಿಮ್ಮ ಲಂಪಟತನದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪದ ಫಲವನ್ನು ನೀವು ಅನುಭವಿಸಿ, ನಾನೇ ಸರ್ವೇಶ್ವರನಾದ ದೇವರು ಎಂದು ತಿಳಿದುಕೊಳ್ಳುವಿರಿ.”


ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು.


ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.


ಆದುದರಿಂದ, ಈ ವಿಶ್ರಾಂತಿಯ ನೆಲೆಯನ್ನು ಸೇರುವ ಸಾಧ್ಯತೆ ಬೇರೆಯವರಿಗಾದರೂ ಇದೆ ಎಂಬುದು ಸ್ಪಷ್ಟವಾಗುತ್ತದೆ. ದೇವರ ವಾಕ್ಯವನ್ನು ಮೊದಲು ಕೇಳಿದವರಾದರೋ, ತಮ್ಮ ಅವಿಶ್ವಾಸದಿಂದ ಅದನ್ನು ಸೇರದೆಹೋದರು.


ಲೋಕಾದಿಯಲ್ಲೇ, ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿದ್ದರೂ ಅವರು, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು,” ಎಂದು ಹೇಳಿದ್ದಾರೆ. ವಿಶ್ವಾಸಿಸುವ ನಾವಾದರೋ ಆ ವಿಶ್ರಾಂತಿಯ ನೆಲೆಯನ್ನು ಸೇರುತ್ತೇವೆ.


ಆದರೂ ಅವರಲ್ಲಿ ಬಹುಮಂದಿ ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಆದ್ದರಿಂದಲೇ ಮರುಭೂಮಿಯಲ್ಲೆ ಮಡಿದು ಮಣ್ಣುಪಾಲಾದರು.


ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.


ಆಮೇಲೆ, ‘ನಾಡುಗಳಲ್ಲೆಲ್ಲಾ ಶ್ರೇಷ್ಠವಾದ ನಾಡಿಗೆ, ಹಾಲೂ ಜೇನೂ ಹರಿಯುವ ಆ ವಾಗ್ದತ್ತನಾಡಿಗೆ ನಿಮ್ಮನ್ನು ಸೇರಿಸೆನು’ ಎಂದು ಮರುಭೂಮಿಯಲ್ಲಿ ಅವರಿಗೆ ಪ್ರಮಾಣಮಾಡಿ ಹೇಳಿದೆ.


ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.


ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಹರಿಸುತ್ತಾ, ನಿಮ್ಮನ್ನು ಜನಾಂಗಗಳಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಒಂದುಗೂಡಿಸಿ,


ಈ ಕಾರಣ, ಇಗೋ, ನಾನು ಆ ನೆಹೆಲಾಮ್ಯನಾದ ಶೆಮಾಯನನ್ನು ಮತ್ತು ಅವನ ಸಂತತಿಯವರನ್ನು ದಂಡಿಸುವೆನು. ಈ ಜನರ ಮಧ್ಯೆ ಅವನಿಗೆ ಯಾವ ಸಂತಾನವೂ ಇರದು. ಜನರಿಗೆ ‘ನಾನು ಮಾಡಬೇಕೆಂದಿರುವ ಒಳಿತನ್ನು ಅವನು ನೋಡದೆಹೋಗುವನು. ಏಕೆಂದರೆ ಅವನು ನನಗೆ ವಿರುದ್ಧ ಪ್ರಚೋದನೆಯ ಮಾತನ್ನು ಆಡಿದ್ದಾನೆ. ಇದು ಸರ್ವೇಶ್ವರನಾದ ನನ್ನ ನುಡಿ’.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು