Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:10 - ಕನ್ನಡ ಸತ್ಯವೇದವು C.L. Bible (BSI)

10 ಆಹಾ ಖಡ್ಗ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ! ಸಾಣೆ ಹಿಡಿದಿದೆ ಹತಿಸುವಂತೆ, ಮಸೆದಿದೆ ಮಿಂಚುವಂತೆ. ಸಂಭ್ರಮಿಸಲಾದೀತೆ ‘ನಮ್ಮ ಕುಮಾರನ ರಾಜದಂಡ’ ಎಂದು? ಮಿಕ್ಕ ದಂಡಗಳನ್ನೆಲ್ಲ ಧಿಕ್ಕರಿಸುವಂಥ ದಂಡವೆಂದುಕೊಂಡು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸಂಹರಿಸುವಂತೆ ಸಾಣೆ ಹಿಡಿದಿದೆ, ಮಿಂಚುವಂತೆ ಮಸೆದಿದೆ; ನಮ್ಮ ಕುಮಾರನ ರಾಜದಂಡವು ಉಳಿದ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬುದಾಗಿ ನಾವು ಸಂಭ್ರಮಪಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸಂಹರಿಸುವಂತೆ ಸಾಣೆಹಿಡಿದಿದೆ, ವಿುಂಚುವಂತೆ ತಿಕ್ಕಿದೆ. ನಮ್ಮ ಕುಮಾರನ ರಾಜದಂಡವು ವಿುಕ್ಕ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬದಾಗಿ ನಾವು ಸಂಭ್ರಮಪಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕೊಲ್ಲುವದಕ್ಕಾಗಿ ಆ ಖಡ್ಗವು ಹರಿತಮಾಡಲ್ಪಟ್ಟಿದೆ, ಮಿಂಚಿನಂತೆ ಹೊಳೆಯುತ್ತಿದೆ. ನನ್ನ ಮಗನೇ, ನಾನು ನಿನ್ನನ್ನು ಶಿಕ್ಷಿಸುತ್ತಿದ್ದ ಬೆತ್ತದಿಂದ ನೀನು ಓಡಿಹೋದೆ. ಬೆತ್ತದ ಶಿಕ್ಷೆಯನ್ನು ಅನುಭವಿಸಲು ನೀನು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಂಹರಿಸಲು ಸಾಣೆಹಿಡಿದಿದೆ; ಮಿಂಚುವಂತೆ ಮಸೆಯಲಾಗಿದೆ. “ ‘ಹಾಗಾದರೆ ನನ್ನ ಮಗ ಯೆಹೂದದ ರಾಜದಂಡದಲ್ಲಿ ನಾವು ಸಂತೋಷ ಪಡಬಹುದೋ? ಅಂಥ ಪ್ರತಿಯೊಂದು ಬೆತ್ತವನ್ನೂ ಖಡ್ಗವು ತಿರಸ್ಕರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:10
23 ತಿಳಿವುಗಳ ಹೋಲಿಕೆ  

ಆ ವನಕ್ಕೆ ಹೀಗೆ ಪ್ರವಾದಿಸು: ‘ಸರ್ವೇಶ್ವರನ ಮಾತನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು. ಅದು ನಿನ್ನಲ್ಲಿನ ಎಲ್ಲಾ ಹಸಿರುಮರಗಳನ್ನೂ ಒಣಮರಗಳನ್ನೂ ಕಬಳಿಸಿಬಿಡುವುದು; ಧಗಧಗಿಸುವ ಜ್ವಾಲೆ ಆರದೆ, ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕುಂದಿಸುವುದು.


ಹಾರಿ ಓಡುವ ನಿನ್ನ ಬಾಣಗಳ ಬೆಳಕಿಗೆ ಥಳಥಳಿಸುವ ನಿನ್ನ ಈಟಿಯ ಹೊಳಪಿಗೆ ಸೂರ್ಯಚಂದ್ರ ಅಡಗುತ್ತವೆ ಗೂಡಿನೊಳಗೆ.


ರಾಹುತರ ರಭಸ, ಕತ್ತಿಯ ಥಳಥಳಿಪು, ಈಟಿಯ ಝಳಿಪು; ಹತರಾದವರು ಅಗಣಿತ, ಸತ್ತವರು ಅಸಂಖ್ಯಾತ, ಶವಗಳ ರಾಶಿ ವಿಪರೀತ; ನುಗ್ಗುವವರು ಎಡವುತಿಹರು ಹೆಣಗಳನು ದಾಟಿಹೋಗುತ.


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿ. ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ತೊಟ್ಟುಕೊಳ್ಳಿರಿ!”


ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ.


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.


ಬಳಕೆಗೆ ಸಿದ್ಧವಿರಲೆಂದು ಕೊಡಲಾಗಿದೆ ಆ ಖಡ್ಗ ಮಸೆಯಲಿಕ್ಕೆ ಮಸೆದು, ಸಾಣೆ ಹಿಡಿದು, ಸಜ್ಜಾಗಿದೆ ಅದು ಹತ್ಯಗಾರನ ಹಿಡಿತಕ್ಕೆ.


ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.


ನಾನು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗ ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು