Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:2 - ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ , ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ಯೆರೂಸಲೇವಿುಗೆ ಅಭಿಮುಖನಾಗಿ ಅಲ್ಲಿನ ಪವಿತ್ರಸ್ಥಾನಗಳ ಕಡೆಗೆ ಮಾತಾಡುತ್ತಾ ಇಸ್ರಾಯೇಲ್ ದೇಶದ ಪ್ರಸ್ತಾಪವನ್ನೆತ್ತಿ ಆ ದೇಶಕ್ಕೆ ಹೀಗೆ ಸಾರಿಹೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ಜೆರುಸಲೇಮಿನ ಕಡೆಗೆ ನೋಡಿ ಅವರ ಪವಿತ್ರ ಸ್ಥಳಗಳಿಗೆ ವಿರುದ್ಧವಾಗಿ ಹೇಳು. ನನ್ನ ಪರವಾಗಿ ಇಸ್ರೇಲ್ ದೇಶದ ವಿರುದ್ಧವಾಗಿ ಮಾತನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:2
21 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ, ಆ ಕಡೆಗೆ ಮಾತಾಡುತ್ತಾ ದಕ್ಷಿಣ ಸೀಮೆಯ ವನವನ್ನು ಉದ್ದೇಶಿಸಿ ಪ್ರಸ್ತಾಪವನ್ನೆತ್ತಿ,


“ನಿನ್ನ ತೋಳಿಗೆ ಹೊದಿಕೆಯಿಲ್ಲದೆ, ಮುತ್ತಿಗೆಯಾದ ಜೆರುಸಲೇಮಿನ ಕಡೆಗೆ ಮೋರೆ ತಿರುಗಿಸಿ, ಅದರ ವಿರುದ್ಧ ಅಶುಭವನ್ನು ಪ್ರವಾದಿಸು.


“ನರಪುತ್ರನೇ, ನೀನು ಸಿದೋನಿಗೆ ಅಭಿಮುಖನಾಗಿ ಅದರ ಬಗ್ಗೆ ಹೀಗೆ ನುಡಿ -


“ನರಪುತ್ರನೇ, ನೀನು ಅಮ್ಮೋನಿಗೆ ಅಭಿಮುಖವಾಗಿ ಅದನ್ನು ಕುರಿತ ದೈವಸಂಕಲ್ಪವನ್ನು ಪ್ರಕಟಿಸುತ್ತಾ ಅದಕ್ಕೆ ಹೀಗೆ ನುಡಿ:


ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.


“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?


“ನರಪುತ್ರನೇ, ರೋಷಿನವರನ್ನು, ಮೆಷೆಕಿನವರನ್ನು ಹಾಗು ತೂಬಲಿನವರನ್ನು ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ:


“ನರಪುತ್ರನೇ, ನೀನು ಇಸ್ರಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ: ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳಿರಿ:


“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನ ಕಡೆಗೆ ಮುಖಮಾಡಿ ಅವನನ್ನು ಹಾಗು ಈಜಿಪ್ಟಿನವರೆಲ್ಲರನ್ನು ಕುರಿತು ಹೀಗೆ ನುಡಿ -


“ನರಪುತ್ರನೇ, ಇಸ್ರಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ,


ಆಮೇಲೆ ಕಬ್ಬಿಣದ ಹೆಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಯೇಲ್ ವಂಶದವರಿಗೆ ಒಂದು ಸಂಕೇತ.


ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ನಾನು ಮಾತಾಡಿದ ಮೇಲೆ ಅವರು ಮಾತೆತ್ತುತ್ತಿರಲಿಲ್ಲ ನನ್ನ ಮಾತು ಹನಿಹನಿಯಾಗಿ ಅವರ ಕಿವಿಗೆ ಬೀಳುತ್ತಿತ್ತು.


ಸರ್ವೇಶ್ವರ ನನಗೆ ಈ ವಾಣಿಯನ್ನು ದಯಪಾಲಿಸಿದರು -


ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ


ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಶಾಪಹಾಕು, ತಪ್ಪದೆ ಹಾಕು,” ಎಂದು ಆಜ್ಞಾಪಿಸಿದರು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು