Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:24 - ಕನ್ನಡ ಸತ್ಯವೇದವು C.L. Bible (BSI)

24 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಿಮ್ಮ ಅಪರಾಧಗಳು ಬೆಳಕಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ಪ್ರತ್ಯಕ್ಷವಾಗಿ, ನೀವು ನಿಮ್ಮ ಅಧರ್ಮವನ್ನು ನನ್ನ ನೆನಪಿಗೆ ತಂದಿರುವಿರಿ; ಆದಕಾರಣ ಶತ್ರುವಿನ ಕೈಗೆ ಸಿಕ್ಕಿಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಅಪರಾಧಗಳು ಬಯಲಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ, ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು, ಪಾಪಿಗಳಾಗಿ ನನ್ನ ನೆನಪಿಗೆ ತಂದಿರುವಿರಿ. ಆದುದರಿಂದ ಶತ್ರುವಿನ ಕೈಗೆ ಸಿಕ್ಕಿ ಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಅಪರಾಧಗಳು ಬೈಲಿಗೆ ಬಂದು ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು [ಪಾಪಿಗಳಾಗಿ] ನನ್ನ ನೆನಪಿಗೆ ಬಂದಿರಾದ ಕಾರಣ ಶತ್ರುವಿನ ಕೈಗೆ ಸಿಕ್ಕಿಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀನು ಅನೇಕ ದುಷ್ಕೃತ್ಯಗಳನ್ನು ಮಾಡಿರುವೆ. ನಿನ್ನ ಪಾಪಗಳು ಬಹಳ ಸ್ಪಷ್ಟವಾಗಿವೆ. ನೀನು ದೋಷಿ ಎಂಬುದನ್ನು ನಾನು ನೆನಪುಮಾಡಿಕೊಳ್ಳುವಂತೆ ಮಾಡುವೆ. ವೈರಿಯು ನಿನ್ನನ್ನು ಹಿಡಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಿಮ್ಮ ದ್ರೋಹಗಳು ಪ್ರಕಟವಾಗಿ, ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ, ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಗೆ ಸಿಕ್ಕಿ ಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:24
20 ತಿಳಿವುಗಳ ಹೋಲಿಕೆ  

ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ಜೆರುಸಲೇಮ್ ನಗರ ಸುರಿಸಿದ ರಕ್ತ ಅದರಲ್ಲೇ ನಿಂತಿದೆ. ಧೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ, ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ.


‘ನಾವೆಲ್ಲಿಗೆ ಹೋಗಬೇಕು?’ ಎಂದು ಕೇಳಿಯಾರು. ಆಗ ನೀನು ಅವರಿಗೆ : ‘ಇದು ಸರ್ವೇಶ್ವರನ ಸಂದೇಶ: ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಸಾಯುವರು’ ಎಂದು ಹೇಳು.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.


ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರಮಾಡಿರುವೆ.


ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಆದರೆ ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸೆಯಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವರು ತನ್ನ ಕೈಗೆ ಸಿಕ್ಕಿಬೀಳಲೆಂದು ಅವರ ಅಧರ್ಮವನ್ನು ಅವನು ಬೆಳಕಿಗೆ ತರುವನು.


ಇಸ್ರಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ, ನಿನಗೆ ಸಮಯವು ಸಮೀಪಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.


ಸಮಸ್ತ ಕಸ್ದೀಯರು, ಪಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಸ್ಸೀರಿಯರೆಲ್ಲರನ್ನೂ ನಾನು ನಿನಗೆ ವಿರುದ್ಧ ಎಬ್ಬಿಸಿ, ಎಲ್ಲ ಕಡೆಯಿಂದಲೂ ನಿನ್ನ ಮೇಲೆ ಬೀಳುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು