Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:27 - ಕನ್ನಡ ಸತ್ಯವೇದವು C.L. Bible (BSI)

27 ಧ್ವಂಸ, ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತೆ ಇರದು; ಅವನಿಗೆ ರಾಜ್ಯವನ್ನು ವಹಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನು ದೊಬ್ಬಿಬಿಡುವೆನು, ದೊಬ್ಬಿಬಿಡುವೆನು, ದೊಬ್ಬಿಬಿಡುವೆನು; [ರಾಜ್ಯಕ್ಕೆ] ಬಾಧ್ಯನು ಬರುವದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಆ ನಗರವನ್ನು ಸಂಪೂರ್ಣವಾಗಿ ನಾಶಮಾಡುವೆನು ಆದರೆ ನಾನು ನೇಮಿಸಿದ ವ್ಯಕ್ತಿಯು ರಾಜನಾಗುವ ತನಕ ಇದು ಸಂಭವಿಸುವುದಿಲ್ಲ; ಅವನು ರಾಜನಾದ ಮೇಲೆ ಈ ಪಟ್ಟಣವನ್ನು ಅವನಿಗೊಪ್ಪಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:27
40 ತಿಳಿವುಗಳ ಹೋಲಿಕೆ  

ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಸಂಭವಿಸಿದೆ ಪರಿಶೋಧನೆ ಏನು ಗತಿ, ರಾಜದಂಡವೇ ನಾಶವಾದರೆ!


ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.


ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.


ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು I ನಮಗೊಬ್ಬ ಶಕ್ತಿಯುತ ಮುಕ್ತಿದಾತನನು II


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.


“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.


ಹೌದು, ಇಸ್ರಯೇಲರು ಬಲವಂತರು ಯಕೋಬ್ಯರದೇ ದೊರೆತನವಾಯಿತು ನಗರಗಳಿಂದ ತಲೆತಪ್ಪಿಸಿಕೊಂಡವರೂ ನಾಶವಾದರು.”


ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೂ ನನ್ನ ಪರಿಚಾರಕರಾದ ಲೇವಿಕುಲದ ಯಾಜಕರೊಂದಿಗೂ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.


ಸರ್ವೇಶ್ವರನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ದಾಸ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.


“ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.


ಅವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದ. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದ.


ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಒಡ್ಡುಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು