Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:31 - ಕನ್ನಡ ಸತ್ಯವೇದವು C.L. Bible (BSI)

31 ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಊದಿ, ನಿನ್ನನ್ನು ಮೃಗಪ್ರಾಯರೂ, ಹಾಳುಮಾಡುವುದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ ರೋಷಾಗ್ನಿಯನ್ನು ಊದಿ ನಿನ್ನನ್ನು ಮೃಗಪ್ರಾಯರೂ ಹಾಳುಮಾಡುವದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿನ್ನ ಮೇಲೆ ನನ್ನ ರೌದ್ರವನ್ನು ಸುರಿಸುವೆನು. ನನ್ನ ರೌದ್ರವು ಬಿಸಿಗಾಳಿಯಂತೆ ನಿನ್ನನ್ನು ಸುಡುವದು. ನಾನು ನಿನ್ನನ್ನು ಕ್ರೂರ ಮನುಷ್ಯರ ಕೈಗೆ ಒಪ್ಪಿಸುವೆನು. ಅವರು ಜನರನ್ನು ಕೊಲ್ಲುವುದರಲ್ಲಿ ನಿಪುಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:31
19 ತಿಳಿವುಗಳ ಹೋಲಿಕೆ  

ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


“ನಾನು ಆ ನಾಡಿನ ಮೇಲೆ ಕೋಪಕಾರಿ, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನ ಜಾನುವಾರುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ


“ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II


ಪ್ರಭುವಿನ ಶ್ವಾಸ ಬೀಸಲು ಒಣಗಿ ಹೋಗುವುದಾ ಹುಲ್ಲು ಬಾಡಿ ಹೋಗುವುದಾ ಹೂವು ಮಾನವರೆಲ್ಲ ಹುಲ್ಲೇ ಹುಲ್ಲು.


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು, ಅವನ ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೆ ಕತ್ತಿಗೆ ತುತ್ತಾಗುವಂತೆ ಮಾಡುವೆನು.”


ಸುರಿ ರೌದ್ರವನು ನಿನ್ನನರಿಯದಾ ಮ್ಲೇಚ್ಛರ ಮೇಲೆ I ನಿನ್ನ ಶ್ರೀನಾಮವನು ಉಚ್ಚರಿಸದಾ ರಾಜ್ಯಗಳ ಮೇಲೆ II


ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು;


ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ಸುಲಿಗೆಗಾಗಿ ನಿನ್ನನ್ನು ಮ್ಲೇಚ್ಛರಿಗೆ ವಶಪಡಿಸುವೆನು. ಜನಾಂಗಗಳಿಂದ ಕಿತ್ತು, ದೇಶಗಳಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


ಸೀಳಿಬಿಟ್ಟಿರುವೆ ಅವನಾ ಪೌಳಿಗೋಡೆಗಳನು I ಹಾಳುಮಾಡಿಬಿಟ್ಟಿರುವೆ ಕೋಟೆಕೊತ್ತಲಗಳನು II


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು