Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:14 - ಕನ್ನಡ ಸತ್ಯವೇದವು C.L. Bible (BSI)

14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡಿರುವೆಯಾ? ಕೈಗಳನ್ನು ಬಲಪಡಿಸಿಕೊಂಡಿರುವೆಯಾ? ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ. ಅಂತೆಯೇ ನಡೆಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡೀಯೋ, ಕೈಗಳನ್ನು ಬಲಪಡಿಸಿಕೊಂಡೀಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ನಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನಿಮ್ಮನ್ನು ಶಿಕ್ಷಿಸಲು ಬಂದಾಗ ನೀವು ಧೈರ್ಯಶಾಲಿಗಳಾಗುವಿರಾ? ನಿಮ್ಮಲ್ಲಿ ಬಲವಿರುವದೋ? ನಾನೇ ಯೆಹೋವನು. ನಾನು ಹೇಳಿದ ಪ್ರಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವುದೋ? ನಿನ್ನ ಕೈಗಳು ಬಲವಾಗಿರುವುವೋ? ಯೆಹೋವ ದೇವರಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:14
20 ತಿಳಿವುಗಳ ಹೋಲಿಕೆ  

‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”


ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”


ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”


ಜೀವಸ್ವರೂಪರಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಅದೆಷ್ಟು ಭಯಂಕರ!


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ಭೂಮ್ಯಾಕಾಶಗಳು ಗತಿಸಿಹೋಗುವುವು, ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುವುವು.


ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!


ನಿನ್ನೊಡನೆ ಗೆಳೆಯರಂತೆ ಬಾಳಲು ನೀನೇ ಪಳಗಿಸಿದವರನ್ನು ನಿನಗೆ ಒಡೆಯರನ್ನಾಗಿ ನಾನು ನೇಮಿಸುವಾಗ ಏನು ಹೇಳುವೆ? ಹೆರುವವಳಿಗೆ ಬರುವಂಥ ವೇದನೆ ಆಗ ನಿನಗೆ ಬರದೆ ಇರುವುದೆ?


ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?


ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ಎಲ್ಲರ ಕೈಗಳು ಜೋಲು ಬಿದ್ದಿರುವುವು; ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.


ಸರ್ವೇಶ್ವರನಾದ ನಾನೇ ಬಿದ್ದುಹೋದುದನ್ನು ಕಟ್ಟಿ, ಹಾಳಾದುದನ್ನು ಬೆಳೆಯಿಸಿದ್ದೇನೆಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಸರ್ವೇಶ್ವರನಾದ ನಾನೇ ನುಡಿದಿದ್ದೇನೆ, ಹಾಗೆಯೇ ನಡೆಸುತ್ತೇನೆ.”


ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?


“ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?


ಆದಕಾರಣ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಟ್ಟುಬಿಡಿ. ‘ಇಡೀ ನಾಡೇ ನಾಶವಾಗಲಿ’ ಎಂಬ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ತೀರ್ಪನ್ನು ನಾನು ಕೇಳಿದ್ದೇನೆ.


ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.”


ಅದರ ಬೋಕಿಗಳನ್ನು ಕಚ್ಚಿ, ನೆಕ್ಕಿ, ನಿನ್ನ ಮೊಲೆಗಳನ್ನು ಬಗೆದುಕೊಳ್ಳುವೆ. ಇದು ನನ್ನ ಅಪ್ಪಣೆ ಎಂಬುದೇ ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು