Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:2 - ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ರಕ್ತಸಿಕ್ತವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ಸ್ಥಿರಮನಸ್ಸು ಮಾಡಿರುವೆಯಾ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವೋ, ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ನೀನು ಹಂತಕರ ನಗರಕ್ಕೆ ನ್ಯಾಯತೀರಿಸುವೆಯಾ? ಆಕೆಯ ಭಯಂಕರ ದುಷ್ಟತನದ ಬಗ್ಗೆ ಆಕೆಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಈಗ ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ? ಹಾಗಾದರೆ ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:2
22 ತಿಳಿವುಗಳ ಹೋಲಿಕೆ  

ಧಿಕ್ಕಾರ ರಕ್ತಮಯವಾದ ನಗರಕೆ! ತುಂಬಿದೆ ಅದರಲಿ ಸುಳ್ಳು ಮತ್ತು ಸುಲಿಗೆ ನಿಲ್ಲದೆ ನಡೆಯುತ್ತಿದೆ ಅದರಲಿ ಕೊಳ್ಳೆ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಆರಿಸಿ, ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು.


“ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನೀನೂ ಮನಸ್ಸು ಮಾಡಿರುವೆಯಾ? ಇವರ ಪಿತೃಗಳ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು -


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.


ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು.’ ಹೌದು, ಈ ಪೀಳಿಗೆಯವರೇ ಲೆಕ್ಕಕೊಡಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು.


ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.


ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿನ್ನ ಮಧ್ಯೆ ರಕ್ತ ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ, ನಿನ್ನ ಕೇಡಿಗಾಗಿಯೇ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನೆ ಹೊಲೆಗೆಡಿಸಿಕೊಂಡ ನಗರಿಯೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು