Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:26 - ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧವಸ್ತುಗಳನ್ನು ಹೊಲೆಮಾಡಿದ್ದಾರೆ; ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧಾಶುದ್ಧವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳಿಗೆ ವಿಮುಖರಾಗಿದ್ದಾರೆ; ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:26
31 ತಿಳಿವುಗಳ ಹೋಲಿಕೆ  

ದೇವರಿಗೆ ಮೀಸಲಾದ ವಸ್ತ್ರಗಳಾವುವು; ಸಲ್ಲದ ವಸ್ತ್ರಗಳಾವುವು; ಶುದ್ಧ, ಆಶುದ್ಧವಾದುವುಗಳಾವುವು ಎಂಬುದನ್ನು ನೀವು ವಿವೇಚಿಸಬೇಕು.


“ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


ನೀನು ನನ್ನ ಪವಿತ್ರವಸ್ತುಗಳನ್ನು ಅಲಕ್ಷ್ಯಮಾಡಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿರುವೆ. ಚಾಡಿಕೋರರು ನಿನ್ನಲ್ಲಿ ರಕ್ತ ಹರಿಸಿದ್ದಾರೆ;


“ಮೀಸಲಾಗಿದದ್ದಕ್ಕೂ ಮೀಸಲಲ್ಲದ್ದಕ್ಕೂ ಇರುವ ಭೇದವನ್ನು ನನ್ನ ಜನರಿಗೆ ತೋರಿಸಿ, ಶುದ್ಧಾಶುದ್ಧ ವಿವೇಚನೆಯನ್ನು ಅವರಿಗೆ ಬೋಧಿಸಲಿ.


ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಓಹೋ, ಇವರು ಸರ್ವೇಶ್ವರನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದೆನಿಸಿಕೊಂಡರು. ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತಂದರು.


ಈಗ ಏಲಿ ಬಹಳ ಮುದುಕನಾಗಿದ್ದ. ತನ್ನ ಮಕ್ಕಳು ಇಸ್ರಯೇಲ್ ಜನರಿಗೆ ಮಾಡುತ್ತಿದ್ದುದೆಲ್ಲಾ ಅವನ ಕಿವಿಗೆ ಬೀಳುತ್ತಿತ್ತು. ದೇವದರ್ಶನದ ಗುಡಾರದ ಬಾಗಿಲಿನಲ್ಲಿ ಕೆಲಸಮಾಡುತ್ತಿದ್ದ ಸ್ತ್ರೀಯರೊಡನೆ ಮಲಗುತ್ತಿದ್ದಾರೆಂಬುದನ್ನೂ ಕೇಳಿದ್ದ.


ಈ ಕಾರಣದಿಂದ. “ನಿಮ್ಮ ದೆಸೆಯಿಂದಲೇ ಯೆಹೂದ್ಯರಲ್ಲದವರು ದೇವರ ಹೆಸರನ್ನು ದೂಷಿಸುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.


ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.


ಆದರೆ ನನ್ನ ಪ್ರಜೆ ಇಸ್ರಯೇಲರು ನನ್ನ ಆಜ್ಞಾನುಸಾರ ನನ್ನ ಮಂದಿರಕ್ಕೆ ತರುವ ಬಲಿದಾನಗಳ ಹಾಗು ನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿದ್ದೀರಿ. ಅವುಗಳ ಶ್ರೇಷ್ಠಭಾಗಗಳಿಂದ ನಿಮ್ಮನ್ನೇ ಕೊಬ್ಬಿಸಿಕೊಳ್ಳುತ್ತಿದ್ದೀರಿ; ಏಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೇ?


ನೀವು ಶುದ್ಧಾಶುದ್ಧ ಜಂತುಗಳನ್ನು ಪಕ್ಷಿಗಳನ್ನು ವಿವೇಚನೆಮಾಡಿ ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪ್ರಾಣಿಪಕ್ಷಿ ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಹೇಯಮಾಡಿಕೊಳ್ಳಬಾರದು.


ಇದರಿಂದ ಶುದ್ಧಾಶುದ್ಧಗಳನ್ನೂ, ಭಕ್ಷ್ಯಾಭಕ್ಷ್ಯಗಳನ್ನೂ ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು


ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ ಅವನು ಕುಷ್ಠರೋಗಿ; ಅಶುದ್ಧನು.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.


ಆಲಯವನ್ನು ನಾಲ್ಕು ಪಾರ್ಶ್ವಗಳಲ್ಲಿಯೂ ಅಳೆದನು; ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರಳತೇ ಕೋಲುದ್ದದ, ಐನೂರಳತೇ ಕೋಲಗಲದ ಗೋಡೆ ಸುತ್ತಮುತ್ತಲಿತ್ತು.


“ಇಸ್ರಯೇಲರು ನನ್ನನ್ನು ತೊರೆದಾಗ, ನನ್ನಿಂದಗಲಿ ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು, ನನಗೆ ದೂರವಾಗಿಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.


ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.


ಇದಲ್ಲದೆ, ನನಗೆ ಈ ಅಪರಾಧವನ್ನು ನಡೆಸಿದ್ದಾರೆ: ಆಹುತಿಕೊಟ್ಟ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಶುದ್ಧ ಮಾಡಿದರು.


ವ್ಯಾಜ್ಯವಾಗುವಾಗ ಅದನ್ನು ತೀರಿಸಲು ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್‍ಗಳನ್ನು ಜನರು ಆಚರಿಸುವಂತೆ ನೋಡಿಕೊಳ್ಳಲಿ.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು